ಅಯೋಧ್ಯೆಯ ರಾಮ ಮಂದಿರದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

ಅಯೋಧ್ಯೆಯ ರಾಮ ಮಂದಿರದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿಯವರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಅಂಚೆ ಚೀಟಿಗಳು ಐತಿಹಾಸಿಕ ಘಟನೆಯ ಸಾಕ್ಷಿಯಾಗಿ ಮತ್ತು ಅದರ ಸುತ್ತಲಿನ ವಿಚಾರಗಳನ್ನು ಭವಿಷ್ಯಕ್ಕೆ ತಿಳಿಸುವ ಸಂಕೇತಗಳಾಗಿ ಉಳಿಯುತ್ತವೆ ಎಂದಿದ್ದಾರೆ. ದೇಗುಲದ ಸ್ಮರಣಾರ್ಥ ಅಂಚೆ ಚೀಟಿಗಳು ಮತ್ತು ಭಗವಾನ್ ರಾಮನ ಕುರಿತಾದ ಅಂಚೆಚೀಟಿಗಳ ಪುಸ್ತಕದ ಬಿಡುಗಡೆಯ ಬಳಿಕ, ಅಂಚೆ ಚೀಟಿಗಳು ಭವಿಷ್ಯದ ಪೀಳಿಗೆಗೆ ಇತಿಹಾಸ ಮತ್ತು ರಾಮಮಂದಿರದ ಕುರಿತಾದ ಐತಿಹಾಸಿಕ ಕ್ಷಣಗಳನ್ನು ತಲುಪಿಸುವ ಮಾಧ್ಯಮಗಳಾಗಿವೆ. ಈ ಅಂಚೆ ಚೀಟಿಗಳು ಕೇವಲ ಕಾಗದದ ತುಣುಕುಗಳು ಅಥವಾ ಕೇವಲ ಕಲಾಕೃತಿಗಳಲ್ಲ. ಅವು ರಾಮಾಯಣದ ಕುರಿತಾದ ತಮ್ಮದೇ ಆದ ವಿಶಿಷ್ಟ ಗುರುತುಗಳನ್ನು ಹೊಂದಿವೆ ಎಂದಿದ್ದಾರೆ.
ಇಂದು ಬಿಡುಗಡೆ ಮಾಡಲಾದ ಅಂಚೆ ಚೀಟಿಗಳಿಂದ ಯುವಕರು ಬಹಳಷ್ಟು ಕಲಿಯುತ್ತಾರೆ. ಅಂಚೆ ಚೀಟಿಯಲ್ಲಿ ರಾಮ್ ಚರಿತ್ ಮಾನಸ್ನ ಶ್ಲೋಕವಿದೆ. ದೇಶಕ್ಕೆ ಸಕಾರಾತ್ಮಕ ಸಂದೇಶವನ್ನು ನೀಡುವ ಸೂರ್ಯನ ಚಿತ್ರವಿದೆ. ಅಲ್ಲದೇ ಸರಯು ನದಿಯ ಚಿತ್ರಣವೂ ಇದರಲ್ಲಿದೆ. ಇದರೊಂದಿಗೆ ಭಗವಾನ್ ರಾಮನ, ಪಂಚತಂತ್ರದ ತತ್ತ್ವವನ್ನು ಆಲ್ಬಮ್ನಲ್ಲಿ ಚಿಕಣಿ ರೂಪದಲ್ಲಿ ಚಿತ್ರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಂದು ಬಿಡುಗಡೆಯಾದ ಆರು ಸ್ಮರಣಾರ್ಥ ಅಂಚೆಚೀಟಿಗಳು ಅಯೋಧ್ಯೆಯಲ್ಲಿನ ರಾಮಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಶಬರಿಯನ್ನು ಒಳಗೊಂಡಿವೆ. ಪ್ರತಿಯೊಂದೂ ಭಗವಾನ್ ರಾಮನಿಗೆ ಸಂಬಂಧಿಸಿದ ವಿಚಾರಗಳಾಗಿವೆ.
ಅಲ್ಲದೇ 48-ಪುಟಗಳ ಪುಸ್ತಕದಲ್ಲಿ ಅಮೆರಿಕ, ನ್ಯೂಜಿಲೆಂಡ್, ಸಿಂಗಾಪುರ್, ಕೆನಡಾ ಮತ್ತು ಕಾಂಬೋಡಿಯಾ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳು ಹೊರಡಿಸಿದ ಅಂಚೆಚೀಟಿಗಳನ್ನು ಒಳಗೊಂಡಿದೆ. ಇದೆಲ್ಲ ದೇಶಗಳ ನಡುವಿನ ಗಡಿಗಳನ್ನೂ ಮೀರಿ ಸಂಪರ್ಕ ಸಾಧಿಸಲು ಸಹಕಾರಿಯಾಗುತ್ತದೆ ಎಂದಿದ್ದಾರೆ
ಎಳನೀರು ಸೇವನೆ, ನೆಲದಲ್ಲೇ ನಿದ್ದೆ, ಸಾತ್ವಿಕ ಆಹಾರ- ರಾಮನ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಕಠಿಣ ವ್ರತ
ನವದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಕಠಿಣ ವ್ರತ ಕೈಗೊಂಡಿದ್ದಾರೆ. ವ್ರತದ ಭಾಗವಾಗಿ ಮೋದಿಯವರು ಕೇವಲ ಎಳನೀರು ಸೇವನೆ ಮಾಡುತ್ತಿದ್ದಾರೆ. ಅಲ್ಲದೇ ಕೇವಲ ಹೊದಿಕೆಯೊಂದಿಗೆ ನೆಲದ ಮೇಲೆ ಮಲಗುತ್ತಿದ್ದಾರೆ.
11-ದಿನಗಳ ಈ ವಿಶೇಷ ವ್ರತದಲ್ಲಿ, ಧ್ಯಾನ ಮತ್ತು ವಿಶೇಷ ಸಾತ್ವಿಕ ಆಹಾರದೊಂದಿಗೆ ಮನಸ್ಸು ಮತ್ತು ದೇಹವನ್ನು ಶುದ್ಧೀಕರಿಸುವುದು ಸೇರಿದೆ. ಈ ನಿಯಮಗಳ ಪ್ರಕಾರ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಹಲವಾರು ಇತರ ವಸ್ತುಗಳ ಸೇವನೆಯನ್ನು ನಿಬರ್ಂಧಿಸಲಾಗುತ್ತದೆ. ಮೋದಿಯವರು ಈ ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ.
ಜನವರಿ 12ರಿಂದ ರಾಮಂದಿರದಲ್ಲಿ ವಿಧಿ-ವಿಧಾನಗಳು ಆರಂಭಗೊಂಡಿವೆ. ಜ.22ರಂದು ಪ್ರಧಾನಿ ಮೋದಿಯವರು ಪ್ರಾಣ ಪ್ರತಿಷ್ಠಾಪನೆಗೆ ಪೂಜೆ ನೆರವೇರಿಸಲಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಅರ್ಚಕರ ತಂಡವು ಪ್ರಾಣಪ್ರತಿಷ್ಠೆಯ ಮುಖ್ಯ ವಿಧಿಗಳನ್ನು ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.


