
ಉಡುಪಿ: ನಗರದಲ್ಲಿ ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ಸಂಭವಿಸಿದೆ.
ಜೆಎಮ್ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್ ಅಡ್ಡಗಟ್ಟಿ ಚೂರಿ ಇರಿದಿದ್ದಾರೆ ಎಂದು ತಿಳಿಯಲಾಗಿದೆ.


