ಮಂಗಳೂರು : ಸೇಂಟ್ ಜೆರೋಸಾ ಶಾಲೆಯ ವಿವಾದದ ತನಿಖೆಗೆ ಮಂಗಳೂರಿಗೆ ಆಗಮಿಸಿದ ಐಎಎಸ್ ಅಧಿಕಾರಿ ಆಕಾಶ್ ಶಂಕರ್.

ಮಂಗಳೂರು : ನಗರದ ಜೆಪ್ಪು ವೇಲೆನ್ಸಿಯಾ ಬಳಿ ಇರುವ ಸೇಂಟ್ ಜೆರೋಸಾ ಶಾಲೆಯ ಘಟನೆಗೆ ಸಂಬಂಧಿಸಿದಂತೆ ವಿಶೇಷ ತನಿಖೆ ನಡೆಸಲು ಐಎಎಸ್ ಅಧಿಕಾರಿ ಆಕಾಶ್ ಶಂಕರ್ ನಗರಕ್ಕೆ ಆಗಮಿಸಿದ್ದಾರೆ. ಆಕಾಶ್ ಶಂಕರ್ ಅವರು ಗುಲ್ಬರ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ

ಸದ್ಯ ಆಕಾಶ್ ಅವರು ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಡಿಡಿಪಿಐ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಸೇಂಟ್ ಗೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಅವರು ಸಕ್ರಿಯವಾಗಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.ಇದರ ಜೊತೆಗೆ ದಾಖಲಿಸಲಾಗಿದ್ದ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮಕ್ಕಳು ಹಾಗೂ ಪೋಷಕರ ಲಿಖಿತ ಹೇಳಿಕೆಗಳನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಸಲ್ಲಿಸಿದ್ದಾರೆ.

ಈ ಕುರಿತು ಮಾತನಾಡಿದ ಆಕಾಶ್ ಶಂಕರ್, ಈ ಪ್ರಕರಣದ ಸಮಗ್ರ ತನಿಖೆ ನಡೆಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ, ಹಂತ ಹಂತವಾಗಿ ಮುಂದುವರಿಯುತ್ತೇನೆ. ನಾನು ಘಟನೆಯ ಬಗ್ಗೆ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದೇನೆ ಮತ್ತು ಮುಂದಿನ ಎರಡು ದಿನಗಳಲ್ಲಿ ನನ್ನ ತನಿಖೆಯನ್ನು ನಿಖರವಾಗಿ ಯೋಜಿಸಿದ್ದೇನೆ. ಆದಷ್ಟು ಬೇಗ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಉದ್ದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *