
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ “ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶೀಲಾನ್ಯಾಸ ಕಾರ್ಯಕ್ರಮವು ಇಂದು ಬೆಳಿಗ್ಗೆ 9.30ಕ್ಕೆ ಶ್ರೀ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಮಹಾ ದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರ ಮುಖ್ಯ ಉಪಸ್ಥಿತಿಯಲ್ಲಿ, ಶ್ರೀ ತೋನ್ಸೆ ಆನಂದ್ ಎಮ್. ಶೆಟ್ಟಿ ಮತ್ತು ಶ್ರೀಮತಿ ಶಶಿರೇಖಾ ಆನಂದ್ ಶೆಟ್ಟಿಯವರಿಂದ ನೆರವೇರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿ, ಶ್ರೀ ಕೆ. ಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಶ್ರೀ ಸಂತೋಷ್ ಶೆಟ್ಟಿ ಪುಣೆ, ನಿರ್ದೇಶಕರು, ಮಹಾ ಪೋಷಕರು, ಪೋಷಕರು, ದಾನಿಗಳು,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಶ್ರೀ ಉಳ್ತೂರು ಮೋಹನದಾಸ್ ಶೆಟ್ಟಿ, ಜೊತೆ-ಕಾರ್ಯದರ್ಶಿ ಶ್ರೀ ಚಂದ್ರಹಾಸ್ ಶೆಟ್ಟಿ, ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು.







