
ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಭಗತ್ ಸಿಂಗ್ ಸೇವಾ ಯುವಶಕ್ತಿ ಸಂಘದ ಧಾರ್ಮಿಕ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯಲ್ಲಿ ಭಗತ್ ಸಿಂಗ್ ಫೋಟೋ ಹಾಕಿರುವ ಬಗ್ಗೆ ಮಾಹಿತಿ ತಿಳಿದ ಪುತ್ತೂರು ಸಹಾಯಕ ಆಯುಕ್ತರಿಂದ ಪರಿಶೀಲನೆ ನಡೆಸಲಾಯಿತು.
ದೇಶಾದ್ಯಂತ ಚುನಾವಣಾ ನೀತಿ ಸಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಖಾಸಗಿ ಸಾರ್ವಜನಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯ ಮೇಲು ನಿಗಾ ವಹಿಸಲಾಗಿದೆ. ಆಮಂತ್ರಣ ಪತ್ರಿಕೆಗಳಲ್ಲಿ ಯಾವುದೇ ವ್ಯಕ್ತಿಯ ಹೆಸರು, ಚಿತ್ರ ಪ್ರಕಟಿಸದಿರುವಂತೆ ಚುನಾವಣಾ ಇಲಾಖೆ ಸೂಚನೆ ನೀಡಿದೆ. ಇದೀಗ ಭಗತ್ ಸಿಂಗ್ ಸೇವಾ ಯುವಶಕ್ತಿ ಸಂಘದ ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಭಗತ್ ಸಿಂಗ್ ಫೋಟೋವನ್ನು ಸಂಘಟನೆಯ ಆಯೋಜಕರು ಹಾಕಿದ್ದು ಮಾಹಿತಿ ತಿಳಿದ ಪುತ್ತೂರು ಸಹಾಯ ಆಯುಕ್ತರಿಂದ ಪರಿಶೀಲನೆ ನಡೆಸಲಾಯಿತು. ಸ್ವಾತಂತ್ರ್ಯ ಹೋರಾಟಗಾರನ ಫೋಟೋಕ್ಕೂ ನಿಷೇಧ ಹೇರುವ ಬಗ್ಗೆ ಪುತ್ತೂರು ಚುನಾವಣಾ ಕಚೇರಿಯ ಏಕಗ ವಾಕ್ಷಿ ಪದ್ಧತಿ ಸಿಬ್ಬಂದಿ ಗಳಲ್ಲಿ ಗೊಂದಲ ಉಂಟಾಯಿತು. ಬಳಿಕ ಸಹಾಯಕ ಆಯುಕ್ತ ಜುಬಿನ್ ಮಹೋಪಾತ್ರ ಅವರು ಭಗತ್ ಸಿಂಗ್ ಫೋಟೋಗೆ ನಿಷೇಧ ಹೇರದಂತೆ ಸೂಚಿಸಿದರು.\


