ಮಾರಕಾಯುಧಗಳಿಂದ ಹಲ್ಲೆ ಕೊಲೆ ಯತ್ನ ಪ್ರಕರಣ ದಾಖಲು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕ ಸಮೀಪದ ನಡೆದ ಘರ್ಷಣೆಗೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಅಡ್ಯನಡ್ಕ ನಿವಾಸಿ ಮಹಮ್ಮದ್ ಅಲಿ ಎ (36)ಎಂಬವರ ದೂರಿನಂತೆ ಮಧ್ಯಾಹ್ನ, ತನ್ನ ಮನೆಯಲ್ಲಿರುವ ಸಮಯ, ಆರೋಪಿ ಗಣೇಶ್ ಎಂಬಾತನು ಮನೆಯ ಬಳಿಗೆ ಬಂದು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದು, ಅವಾಚ್ಯವಾಗಿ ಬೈದು, ತಾನು ತಂದಿದ್ದ ಕತ್ತಿಯಿಂದ ಹಲ್ಲೆ ನಡೆಸಿರುತ್ತಾನೆ. ಈ ವೇಳೆ ಸ್ಥಳೀಯರು ಬರುವುದನ್ನು ಕಂಡು ಆರೋಪಿಯು ಜೀವ ಬೆದರಿಕೆ ಹಾಕಿ ಪರಾರಿಯಾಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಹಲ್ಲೆಯಿಂದ ಗಾಯಗೊಂಡ ಅಲಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದೆ.
ಎಣ್ಮಕಜೆ ಗ್ರಾಮ ಮಂಜೇಶ್ವರ ತಾಲೂಕು ಕಾಸರಗೋಡು ನಿವಾಸಿ ಗಣೇಶ್ (29) ರವರು ಆರೋಪಿ ಮಹಮ್ಮದ್ ಅಲಿ ರವರ ವಿರುದ್ಧ ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ನೀಡಿದ ಪ್ರತಿದೂರಿನಂತೆ, ವಿಟ್ಲ ಪೊಲೀಸ್ ಠಾಣೆ ಅ.ಕ್ರ 60/2024 ಕಲಂ: 341,504, 307,324,506 IPC ಪ್ರಕರಣ ದಾಖಲಾಗಿದ್ದು, ಎರಡೂ ಪ್ರಕರಣ ತನಿಖೆ ನಡೆಸಲಾಗುತ್ತಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?