ಚಿಕ್ಕೋಡಿ : ನಡುರಸ್ತೆಯಲ್ಲೇ ಕಾಂಗ್ರೆಸ್​​ ಶಾಸಕ ಲಕ್ಷ್ಮಣ್​​ ಸವದಿ ಆಪ್ತನ ಬರ್ಬರ ಹತ್ಯೆ

ಚಿಕ್ಕೋಡಿ : ಚಿಕ್ಕೋಡಿಯಲ್ಲಿ ಮಾತ್ರ ಲೋಕಸಭೆ ಚುನಾವಣೆಯ ಪೈಪೋಟಿಯು ರಾಜಕೀಯ ಹಿಂಸಾಚಾರಕ್ಕೆ ತಿರುಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರನ್ನು ನಡುರಸ್ತೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶಾಸಕ ಲಕ್ಷ್ಮಣ ಸವದಿ ಆಪ್ತ, ಸ್ಥಳೀಯ ಕಾಂಗ್ರೆಸ್‌ ಮುಖಂಡ ಅಣ್ಣಪ್ಪ ಬಸಣ್ಣ ನಿಂಬಾಳ (58) ಹತ್ಯೆಗೀಡಾಗಿದ್ದಾರೆ.

ಅಥಣಿ ತಾಲೂಕಿನ ಖೀಳೆಗಾಂವ್‌ನಲ್ಲಿ ಅಣ್ಣಪ್ಪ ಬಸಣ್ಣ ನಿಂಬಾಳ ಅವರ ಮೇಲೆ ಆರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು ತೀವ್ರವಾಗಿ ಹಲ್ಲೆಯಾಗಿದ್ದರಿಂದ ಸವದಿ ಆಪ್ತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ಅಣ್ಣಪ್ಪ ಬಸಪ್ಪ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದು ಈ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ರಾಜಕೀಯ ದ್ವೇಷದಿಂದಾಗಿ ಇವರನ್ನು ಹತ್ಯೆ ಮಾಡಲಾಗಿದೆ ಎಂದು ಗ್ರಾಮದ ಮೂಲಗಳು ತಿಳಿಸಿವೆ.ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?