ರಥ ಹೋಗುವ ದಾರಿಯಲ್ಲಿ ಪಾರ್ಕ್ ಮಾಡಿದ ವಾಹನಗಳನ್ನು ಜಖಂಗೊಳಿಸಿದ ಭಕ್ತರು.

ಮಂಗಳೂರು : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ಭಕ್ತರು ರಥ ಸಾಗುವ ಮಾರ್ಗದಲ್ಲಿ ನಿಂತಿದ್ದ ವಾಹನಗಳಿಗೆ ಹಾನಿ ಮಾಡಿದ ಘಟನೆ ವರದಿಯಾಗಿದೆ. ಘಟನೆಯನ್ನು ಸೆರೆಹಿಡಿಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ವರದಿಗಳ ಪ್ರಕಾರ, ದೇವಾಲಯದ ಜಾತ್ರೆಗೆ ಹಾಜರಾಗುವ ಕೆಲವು ಭಕ್ತರು ರಥ ಹೋಗಲು ದಾರಿ ಮಾಡುವ ಸಲುವಾಗಿ ಭಕ್ತರು, ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್‌ಗಳನ್ನು ಬದಿಗೆ ದೂಡಿ ಹಾಕಿದ್ದಾರೆ. ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗಿದೆ.

News Editor

Learn More →

Leave a Reply

Your email address will not be published. Required fields are marked *