ಸುರತ್ಕಲ್: ತಂಡದಿಂದ ಆಟೋ ಚಾಲಕನ ಮೇಲೆ ಹಲ್ಲೆ ; ಪ್ರಕರಣ ದಾಖಲು

ಸುರತ್ಕಲ್ : ಆಟೋ ಚಾಲಕನ ಮೇಲೆ ತಂಡವೊಂದು ರಾತ್ರಿ ಸಮಯದಲ್ಲಿ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರಿನ ಆಶ್ರಯ ಕಾಲನಿ ಸಮೀಪ ನಡೆದಿದೆ.

ಆಟೋ ಚಾಲಕ ಅಝರುದ್ದೀನ್ ಎಂಬುವವರು ತಮ್ಮ ಆಟೋದಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ಪ್ರಶಾಂತ್ ಕಳವಾರು, ಗಣೇಶ, ಪುನೀತ್ ಹಾಗೂ ಇನ್ನಿತರರು ರಸ್ತೆಗೆ ಅಡ್ಡವಾಗಿ ಮಲಗಿ ರಸ್ತೆಯಲ್ಲಿ ಸಂಚರಿಸಲು ಅಡ್ಡಿಪಡಿಸಿದ್ದು, ಚಾಲಕನು ಮನೆಗೆ ಹೋಗಲು ದಾರಿ ಬಿಡುವಂತೆ ವಿನಂತಿಸಿದ್ದಾರೆ.

ಈ ಸಂದರ್ಭ ಆರೋಪಿಗಳಾದ ಪ್ರಶಾಂತ್ ಕಳವಾರು ಹಾಗೂ ಗಣೇಶ ಎಂಬುವವರು ಅಝರುದ್ದೀನ್ ಅವರನ್ನು ತಡೆದು ನಿಲ್ಲಿಸಿದ್ದಾರೆ. ಬಳಿಕ ಅವರ ಕುತ್ತಿಗೆಗೆ ಹಾಗೂ ಮುಖಕ್ಕೆ ಹಲ್ಲೆ ಮಾಡಿದ್ದಾರೆ. ನಂತರ ಅವರ ಜೊತೆಯಲ್ಲಿದ್ದ ಮತ್ತಿಬ್ಬರು ಕೂಡ ಹಲ್ಲೆ ಮಾಡಿದ್ದಾರೆ. ಜೊತೆಗೆ ಪ್ರಶಾಂತ ಹಾಗೂ ಆತನ ಜೊತೆಗಿದ್ದ ಮತ್ತೋರ್ವ ಯುವಕ ಕೊಲೆ ಬೆದರಿಕೆಯೊಡ್ಡಿರುವುದಾಗಿ ಅಝರುದ್ದೀನ್ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!