
ಜೈ ಶ್ರೀರಾಮ್ ಎಂದಿದ್ದ ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮುಸ್ಲಿಂ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಶ್ರೀರಾಮನವಮಿ ಹಿನ್ನೆಲೆಯಲ್ಲಿ ಕಾರಿನಲ್ಲಿ ಬರುತ್ತಿದ್ದ ಮೂವರು ಯುವಕರು ಕಾರಿನೊಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದಾಗ ಈ ವೇಳೆ ರಸ್ತೆ ಮೇಲೆ ಬೈಕ್ನಲ್ಲಿ ಬಂದ ಮುಸ್ಲಿಂ ಯುಕವರಿಬ್ಬರು ಗಲಾಟೆ ಮಾಡಿ, ಅವಾಚ್ಯ ಶಬ್ದಗಳ ನಿಂದನೆ ಮಾಡಿದ್ದರು.
ಜೈ ಶ್ರೀರಾಮ್ ನೋ, ಓನ್ಲಿ ಅಲ್ಲಾ ಹು ಅಕ್ಬರ್ ಅಂತ ಹೇಳಬೇಕು ಎಂದು ಧಮ್ಕಿ ಹಾಕಿದ್ದು, ಅಲ್ಲಾ ಎಂದು ಕೂಗುವಂತೆ ಒತ್ತಾಯ ಮಾಡಿದ್ದರು. ಹಾಗೂ ಕಾರಿನಲ್ಲಿದ್ದ ಯುವಕರಿಗೆ ಹಲ್ಲೆ ಕೂಡಾ ಮಾಡಿದ್ದರು. ಇದೀಗ ಮೂವರು ಯುವಕರನ್ನು ಪೊಲೀಸರು ಬಂಧನ ಮಾಡಿದ್ದು, ಹಲ್ಲೆ ನಡೆಸಿದ್ದ ಓರ್ವ ಆರೋಪಿ ಎಸ್ಕೇಪ್ ಆಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಆರೋಪಿಗಳನ್ನು ಫರ್ಮನ್, ಸಮೀರ್ ಸೇರಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದು, ಇನ್ನೋರ್ವ ಎಸ್ಕೇಪ್ ಆಗಿದ್ದಾನೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ಪೊಲೀಸರು ಆತನ ಹುಡುಕಾಟ ಮುಂದುವರೆಸಿದ್ದಾರೆ.



