
ಮುಸ್ಲಿಂ ಯುವತಿಗೆ ಡ್ರಾಪ್ ನೀಡಿದ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ.
ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈರಜ್ಜನಹಟ್ಟಿ ಗ್ರಾಮದ ಉಮೇಶ್ ಎಂಬುವವರೇ ಹಲ್ಲೆಗೊಳಗಾದವರು. ಅದೇ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಮನೆಗೆ ಡ್ರಾಪ್ ಮಾಡಿದ ವಿಷಯಕ್ಕೆ ಚೇಳುಗುಡ್ಡೆ ಬಳಿ ನೈತಿಕ ಪೊಲೀಸ್ ಗಿರಿ ನಡೆದಿದೆ.
ಹಲ್ಲೆಗೊಳಗಾದ ಯುವಕ ಉಮೇಶ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗೂ ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಧಿಕ್ಕಾರ ಕೂಗಿ ಹಲ್ಲೆ ಮಾಡಿದವರ ಬಂಧನಕ್ಕೆ ಒತ್ತಾಯ ಮಾಡುತ್ತಿದ್ದಾರೆ.
ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಉಮೇಶ್ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ.


