ಅಕ್ರಮ ಮದ್ಯ ಮಾರಾಟ : ಅಬಕಾರಿ ಅಧಿಕಾರಿಗಳಿಗೆ ಮಹಿಳೆಯರಿಂದ ದಿಗ್ಬಂಧನ.

ಗ್ರಾಮದಲ್ಲಿ ನಡೆಯುವ ಅಕ್ರಮ ಮದ್ಯ ಮಾರಾಟವನ್ನು ಸಾಕ್ಷಿ ಸಮೇತ ನೀಡಿದರೂ ಆರೋಪಿಗಳನ್ನು ಬಂಧಿಸದ ಅಬಕಾರಿ ಅಧಿಕಾರಿಗಳನ್ನು ಮಹಿಳೆಯರು ಇಡೀ ರಾತ್ರಿ ಗ್ರಾಮದಿಂದ ತೆರಳದಂತೆ ದಿಗ್ಬಂಧನ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ  ನಡೆದಿದೆ.

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಂಗಾರಗುಂಡ ಗ್ರಾಮದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಅಬಕಾರಿ ಅಧಿಕಾರಿಗಳನ್ನು ಮಹಿಳೆಯರೇ ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಸಾವಿರ ಜನಸಂಖ್ಯೆ ಇಲ್ಲದ ಬಂಗಾರಗುಂಡ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುವ 12 ಮದ್ಯದ ಅಂಗಡಿಗಳಿವೆ. ಇದರಿಂದಾಗಿ ಗ್ರಾಮದಲ್ಲಿ ಬಹುತೇಕ ಕುಟುಂಬಗಳು ಬೀದಿಗೆ ಬಿದ್ದಿದ್ದು, ಸಾಲ ಹಾಗೂ ಮದ್ಯ ವ್ಯಸನಿಗಳು ಸಾವಿಗೀಡಾಗುತ್ತಿದ್ದಾರೆ. ಕೇವಲ ಒಂದು ವರ್ಷದಲ್ಲಿ 8 ಯುವಕರು ಆತ್ಮಹತ್ಯೆ ಮಾಡಿಕೊಂಡು ಕುಟುಂಬಗಳು ಕಂಗಾಲಾಗಿವೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಮದ್ಯದಿಂದ ಇಡೀ ಗ್ರಾಮದಲ್ಲಿ ಶಾಂತಿ ಹಾಗೂ ಕೌಟುಂಬಿಕ ನೆಮ್ಮದಿ ಹಾಳಾಗಿದ್ದು, ಅಬಕಾರಿ ಅಧಿಕಾರಿಗಳು ಮಾತ್ರ ಅಕ್ರಮ ಮದ್ಯ ಮಾರಾಟ ತಡೆಗೆ ಮುಂದಾಗಿಲ್ಲ. ಶಾಲೆ, ದೇವಸ್ಥಾನಗಳಂಥ ಸಾರ್ವಜನಿಕ ಸ್ಥಳಗಳೂ ಮದ್ಯ ವ್ಯಸನಿಗಳ ತಾಣಗಳಾಗಿವೆ ಎಂದು ಕಿಡಿ ಕಾರಿದರು. ಅಕ್ರಮ ಮದ್ಯ ಮಾರಾಟ ತಡೆಯುವ ಕುರಿತು ಹಲವು ಬಾರಿ ಮನವಿ ಮಾಡಿದರೂ ಸಾಕ್ಷಿ ಸಮೇತ ಆರೋಪ ಮಾಡಿ ಎಂದು ಅಬಕಾರಿ ಅಧಿಕಾರಿಗಳು ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಹೀಗಾಗಿಯೇ ರಾತ್ರಿ ಅಕ್ರಮ ಮದ್ಯ ಮಾರಾಟಕ್ಕೆ ಸಂಗ್ರಹಿಸಿದ್ದ ದಾಸ್ತಾನು ಸಮೇತ ಹಿಡಿದು, ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಶನಿವಾರ ರಾತ್ರಿ 10 ಗಂಟೆಗೆ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯವನ್ನು ಮಾತ್ರ ವಶಕ್ಕೆ ಪಡೆಯುತ್ತೇವೆ, ಆರೋಪಿಗಳನ್ನು ಬಂಧಿಸುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಕುಪಿತರಾದ ನೂರಾರು ಮಹಿಳೆಯರು, ಅಬಕಾರಿ ಅಧಿಕಾರಿಗಳು ಸ್ಥಳದಿಂದ ಕದಲದಂತೆ ಕೂಡಿ ಹಾಕಿದ್ದಾರೆ. ಅಂತಿಮವಾಗಿ ಆರೋಪಿಗಳ ವಿರುದ್ಧ ದೂರು ದಾಖಲಿಸಿ ಬಂಧಿಸುವುದಾಗಿ ಹೇಳಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಮಹಿಳೆಯರು ವಶಕ್ಕೆ ಪಡೆದಿದ್ದ ಅಕ್ರಮ ಮದ್ಯದ ಸಮೇತ ಗ್ರಾಮದಿಂದ ಅಬಕಾರಿ ಅಧಿಕಾರಿಗಳು ತೆರಳಲು ಮುಂದಾಗಿದ್ದಾರೆ.

ಈ ಹಂತದಲ್ಲೂ ವಾಹನ ಅಡ್ಡಗಟ್ಟಿರುವ ಮಹಿಳೆಯರು, ಆರೋಪಿಗಳನ್ನು ಬಂಧಿಸದಿದ್ದರೆ ಗ್ರಾಮದಲ್ಲಿ ಭವಿಷ್ಯದಲ್ಲಿ ಉಂಟಾಗುವ ಅಕ್ರಮ ಮದ್ಯ ಮಾರಾಟದ ಎಲ್ಲ ಅಚಾತುರ್ಯಗಳಿಗೆ ಅಬಕಾರಿ ಇಲಾಖೆ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಸಿ ಬಿಟ್ಟು ಕಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?