
ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಡಬದಲ್ಲಿ ರೊಡ್ ಶೋ ನಡೆಸಿದರು.
ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅಣ್ಣಾಮಲೈ ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು. ಕಡಬದ ಎಪಿಎಂಸಿ ಪ್ರಾಂಗಣ ಸಮೀಪದ ಗಣೇಶ್ ಬಿಲ್ಡ್ಂಗ್ ಬಳಿಯಿಂದ ಆರಂಭಗೊಂಡ ರೋಡ್ ಶೋ ಪೇಟೆಯಲ್ಲಿ ಸಾಗಿ ಮುಖ್ಯ ಪೇಟೆಯಲ್ಲಿ ಸಮಾಪನಗೊಂಡಿತು.



