ಬೆಳ್ತಂಗಡಿ: ತಂಡದಿಂದ ಮನೆಗೆ ನುಗ್ಗಿ ತಾಯಿ ಮತ್ತು ಮಗನ ಮೇಲೆ ಹಲ್ಲೆ.

ಬೆಳ್ತಂಗಡಿ: ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ ಎಂಬವರ ಮನೆಯಲ್ಲಿ ಎ.30ರಂದು ರಾತ್ರಿ ಪೂಜಾ ಕಾರ್ಯ ನಡೆಯುತ್ತಿದ್ದ ಸಂದರ್ಭ ಅವರ ಸಂಬಂಧಿಕರೇ ಆದ ಯೋಗೀಶ್, ಆನಂದ ಬೀಜದಡಿ, ಶೇಖ‌ರ್, ಆನಂದ ಕುಲಾಡಿ, ಅಣ್ಣು ಗೌಡ, ಹರೀಶ್ ಹಾಗೂ ಇತರರು ಮನೆ ಬಳಿ ಬಂದು ಸೇಸಮ್ಮ ಅವರ ಮಗ ಹರೀಶ್ ನನ್ನು ಉದ್ದೇಶಿಸಿ ಅವಾಚ್ಯವಾಗಿ ಬೈದಿದ್ದಾರೆ. ಇದಾದ ಬಳಿಕ ಯೋಗೀಶ್ ಎಂಬಾತ ಬಂದು ಹರೀಶ್ ಹಾಗೂ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಇದನ್ನು ನೋಡಿ ತಡೆಯಲು ಹೋದ ಸೇಸಮ್ಮ ಅವರನ್ನು ಆರೋಪಿಗಳು ಸೇರಿ ದೂಡಿ ಹಾಕಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ .ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ 28/2024, ಕಲಂ: 448,504, 323,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?