ಸಿಎಂ ಮತ್ತು ಡಿಸಿಎಂ ಅವರೇ ಪ್ರಜ್ವಲ್ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು: ವಕೀಲ ದೇವರಾಜೇಗೌಡ.

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಿದ್ದಾರೆಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಗೌಪ್ಯ ಸಭೆ ಮಾಡಲಾಗುತ್ತಿದೆ. ಗೌಪ್ಯ ಸಭೆ ನಡೆಸಿ ಯಾರು ಯಾರನ್ನು ಆರೋಪಿಗಳನ್ನಾಗಿ ಮಾಡಬೇಕು ಅನ್ನೋದರ ಸೂಚನೆ ಕೊಟ್ಟಿದ್ದಾರೆ. ನನ್ನ ಜೀವನದ ಹೋರಾಟ ಇದ್ದಿದ್ದು ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ವಿರುದ್ಧವಾಗಿದೆ. ಅದನ್ನೇ ಅಸ್ತ್ರವಾಗಿ ಇಟ್ಟುಕೊಂಡು ಕೆಲ ಕಿಡಿಗೇಡಿ ರಾಜಕಾರಣಿಗಳು ವಾಮ ಮಾರ್ಗದಲ್ಲಿ ಹೋಗಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಚಾಲಕ ಕಾರ್ತಿಕ್ ನನ್ನ ಕಚೇರಿಗೆ ಬಂದು, ಒಂದು ಪೆನ್ ಡ್ರೈವ್ ಹಾಗೂ ‌ಕೆಲ ಡಾಕ್ಯುಮೆಂಟ್ ಕೊಡ್ತಾರೆ. ಅಶ್ಲೀಲ ವಿಡಿಯೋ ಕ್ಲೀಪ್ ಹಾಗೂ ಪತ್ರಿಕೆ ಪೇಪರ್ ಅನ್ನ ನಮ್ಮ ವಕೀಲರಿಗೆ ತಂದು ಕೊಡ್ತಾರೆ. ಇದಕ್ಕೆ ಪೂರಕವಾದ ಕೆಲ ಡಾಕ್ಯುಮೆಂಟ್ ‌ಕೊಡಿ ಅಂತ ಕೇಳಿದ್ದೇನೆ. ಕಾರ್ತಿಕ್ ‌ನನ್ನ ಮನೆಗೆ ಯಾವಾಗ ಬಂದ? ನನ್ನ ಮನೆಯಲ್ಲಿ ‌ಕುಳಿತು‌ ಮಾತನಾಡಿರುವ ವಿಡಿಯೋ ಸಿಬಿಐಗೆ ಕೊಡ್ತಾ ಇದ್ದೇನೆ ಎಂದು ವಕೀಲ ದೇವರಾಜೇಗೌಡ, ವಿಡಿಯೋ ಪ್ರದರ್ಶನ ‌ಮಾಡಿ ತೋರಿಸಿದ್ದಾರೆ.
ನ್ನು ಪೆನ್‌ಡ್ರೈವ್ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗರ ಮೂಲಕ ‌ನನಗೆ ದೊಡ್ಡ ‌ಮಟ್ಟದಲ್ಲಿ ಆಫರ್ ಕೊಟ್ಟಿದ್ದರು. ಕ್ಯಾಬಿನೆಟ್ ಮಟ್ಟದ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟಿದ್ದರು. ಮೊದಲು ನನ್ನನ್ನ ಯಾರು ಭೇಟಿ ಮಾಡಿದರು ಅನ್ನೋದನ್ನ ಅದರ ಅಡಿಯೋ ಬಿಡುಗಡೆ ಮಾಡುತ್ತಿದ್ದೇನೆ. ಇದೇ ವೇಳೆ ಎಲ್.ಆರ್. ಶಿವರಾಮೇಗೌಡ ಹಾಗೂ ದೇವರಾಜೇಗೌಡ ಅಡಿಯೋ ಸಂಭಾಷಣೆ ಮಾಡುತ್ತಿದ್ದೇನೆ. ಇಲ್ಲಿ ನೋಡಿ ಆಡಿಯೋ ಕ್ಲಿಪ್ಪಿಂಗ್ ಎಂದು ಹೇಳಿದರು. ಇದೇ ವೇಳೆ ಎಸ್‌ಐಟಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ. ಇದರ ತನಿಖೆಯನ್ನು ಸಿಬಿಐಗೆ ಕೊಟ್ಟರೆ, ನಾನು ಸಂಪೂರ್ಣ ಆಡಿಯೋ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!