
ಯುವಕನ ಅನುಮಾನಾಸ್ಪದ ಸಾವು
ಪುತ್ತೂರಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಘಟನೆ
ಚೇತನ್ (33) ಸಾವನ್ನಪ್ಪಿದ ಯುವಕ
ಘಟನೆಗೆ ಸಂಬಂಧಿಸಿದಂತೆ ಪೋಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಪೋಲೀಸರಿಗೆ ದೂರು ನೀಡಿದ್ದ ತಾಯಿ
ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ನಿನ್ನೆರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್
ತಾಯಿ ಜೊತೆ ಜಗಳವಾಡಿ ಮನೆ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ ಚೇತನ್
ಯೂಸುಫ್ ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು
ಯೂಸುಫ್ ಮನೆಗೆ ಬಂದ ಚೇತನ್ ತಾಯಿ ನಾಯಿಯನ್ನು ಕಟ್ಟುವ ಸಂಕೊಲೆಯನ್ನು ಚೇತನ್ ಸೊಂಟಕ್ಕೆ ಹಾಕಿ ಮನೆಗೆ ಎಳೆದೊಯ್ದಿದ್ದರು
ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಸೇರಿ ಚೇತನ್ ನನ್ನು ಮನೆಗೆ ಎಳೆದೊಯ್ದಿದ್ದರು
ಸಂಕೋಲೆ ಎಳೆಯುವ ಸಮಯದಲ್ಲಿ ಕುತ್ತಿಗೆಗೆ ಸುತ್ತಿಕೊಂಡಿದ್ದ ಸಂಕೋಲೆ
ಕುತ್ತಿಗೆಯ ಸಂಕೋಲೆ ಬಿಗಿದು ಸಾವನ್ನಪ್ಪಿರುವ ಚೇತನ್
ಘಟನೆಗೆ ಸಂಬಂಧಿಸಿದಂತೆ ತಾಯಿ ಉಮಾವತಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿರುವ ಪೋಲೀಸರು
ಶವಪರೀಕ್ಷೆಯಾಗಿ ಮೃತದೇಹ ಮಂಗಳೂರಿಗೆ ರವಾನೆ
ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು


