ಸುಳ್ಯ: ಎಲ್ಲಾ ಆರೋಪಿಗಳಿಗೂ ಮರಣ ದಂಡನೆಯಾಗಬೇಕು’- ಪ್ರವೀಣ್ ನೆಟ್ಟಾರು ಪತ್ನಿ.


 

ಸುಳ್ಯ, : ನನ್ನ ಪತಿಯ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಮರಣ ದಂಡನೆಯಾಗಬೇಕು. ಮುಂದೆ ಸಮಾಜದಲ್ಲಿ ಇಂತಹ ಘಟನೆ ಮರುಕಳಿಸಬಾರದು ಎಂದು ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಹೇಳಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ಮುಸ್ತಫಾ ಪೈಚಾರ್ ಬಂಧಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಪತಿಯ ಹತ್ಯೆ ಪ್ರಕರಣ ಮುಸ್ತಫಾ ಪೈಚಾರ್​ನೇ ಪ್ರಮುಖ ಆರೋಪಿ. ಅವನನ್ನು ಬಂಧಿಸಿದ್ದಕ್ಕೆ ನಮಗೆ ತುಂಬಾ ಖುಷಿಯಾಗಿದೆ. ಇಡೀ ದೇಶದಲ್ಲಿ ಇಂತಹ ಪ್ರಕರಣಗಳು ಮತ್ತೆ ನಡೆಯಬಾರದು. ನಮ್ಮ ಕುಟುಂಬದ ಪರವಾಗಿ ಎನ್​ಐಎ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ. ಬಂಧನ ಆಗಿರುವುದು ನಮಗೆಲ್ಲ ತುಂಬಾ ಖುಷಿಯಾಗಿದೆ ಎಂದರು.

ಪ್ರಕರಣ ನಡೆದು ಎರಡು ವರ್ಷವಾದರೂ ಆರೋಪಿಗಳನ್ನ ಬಂಧಿಸಲು ಎನ್​ಐಎ ಅಧಿಕಾರಿಗಳು ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಎನ್​​ಐಎ ಸಂಸ್ಥೆಯ ಮೇಲೆ ನಂಬಿಕೆ ಇದೆ. ಎಲ್ಲ ಆರೋಪಿಗಳ ಬಂಧನವಾಗುತ್ತೆ. ಈ ಪ್ರಕರಣದ ಆರೋಪಿಗಳಿಗೆ ನೀಡುವ ಶಿಕ್ಷೆ ಒಂದು ಪಾಠವಾಗಬೇಕು. ಎಸ್​ಡಿಪಿಐ, ಪಿಎಫ್​ಐ ಕಾರ್ಯಕರ್ತರು ಮುಂದೆ ಎಂದಿಗೂ ಇಂತಹ ಪ್ರಕರಣಕ್ಕೆ ಕೈ ಹಾಕಬಾರದು ಎಂದು ಅವರು ಆಗ್ರಹಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?