ಅಮಿತ್ ಶಾ ಕರೆ : ಕುಮಾರಸ್ವಾಮಿ ನಾಳೆ ದೆಹಲಿಗೆ ಬರುವಂತೆ ಸೂಚನೆ.

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿದ್ದು, ಬುಧವಾರ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಬುಧವಾರ ಎನ್​ಡಿಎ ಸಭೆ ನಡೆಯಲಿದೆ. ಅದರಲ್ಲಿ ಹಾಜರಾಗುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಗೆದ್ದ ಇಬ್ಬರು ಜೆಡಿಎಸ್ ಅಭ್ಯರ್ಥಿಗಳು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಎನ್​ಡಿಎ ಸಣ್ಣ ಮಿತ್ರ ಪಕ್ಷಗಳ ನಾಯಕರಿಗೆ ಅಮಿತ್ ಶಾ ಫೋನ್ ಕರೆ ಮಾಡಿದ್ದಾರೆ. ಬಿಹಾರದ ಸಣ್ಣ ಪಕ್ಷಗಳ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಹಿಂದೂಸ್ತಾನಿ ಅವಾಮಿ ಮೋರ್ಚಾ ಅಧ್ಯಕ್ಷ ಜಿತಿನ್ ರಾಮ್ ಮಾಂಝಿ, ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಜೊತೆ ಚರ್ಚೆ ಮಾಡಿದ್ದಾರೆ. ಎನ್​ಡಿಎ ಜೊತೆ ಗಟ್ಟಿಯಾಗಿ ನಿಲ್ಲುವಂತೆ ಅಮಿತ್ ಶಾ ಮನವಿ ಮಾಡಿದ್ದಾರೆ. ಸಂಜೆ 7 ಗಂಟೆಗೆ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಬಳಿಕ ನಾಳೆ ಎನ್​​ಡಿಎ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಆಂಧ್ರ ಪ್ರದೇಶದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಕಿಂಗ್​ಮೇಕರ್​ ಆಗಿ ಹೊರಹೊಮ್ಮಿದ್ದಾರೆ. ಇದೀಗ ಎನ್​ಡಿಎ ಸಂಚಾಲಕರಾಗುವಂತೆ ಚಂದ್ರಬಾಬು ನಾಯ್ಡುಗೆ ಬಿಜೆಪಿಯಿಂದ ದೊಡ್ಡ ಆಫರ್ ದೊರೆತಿದೆ. ಆಂಧ್ರದಲ್ಲಿ 16 ಸ್ಥಾನಗಳಲ್ಲಿ ಟಿಡಿಪಿ ಮುನ್ನಡೆ ಕಾಯ್ದುಕೊಂಡಿದ್ದು ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರ ರಚಿಸಲು ಇಂಡಿಯಾ ಮೈತ್ರಿಕೂಟ ಕೂಡ ಸರ್ಕಸ್ ಆರಂಭಿಸಿದೆ. ಜೆಡಿಯು ನಾಯಕ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಜೊತೆ ಮಾತುಕತೆಗೆ ಮುಂದಾಗಿದೆ. ಈ ಇಬ್ಬರು ನಾಯಕರ ಜತೆ ಶರದ್ ಪವಾರ್ ಈಗಾಗಲೇ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕಿಂಗ್​ಮೇಕರ್​​ಗಳ ಜತೆ ಶರದ್ ಪವಾರ್ ನಿರಂತರ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ನಿತೀಶ್, ನಾಯ್ಡು ಜೊತೆ ಮೋದಿ ಮಾತುಕತೆ ನಡೆಸಿದ್ದಾರೆ. ಇಬ್ಬರೂ ನಾಯಕರ ಜೊತೆ ಅಮಿತ್ ಶಾ ಕೂಡ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!