ಬೆಂಗಳೂರು : ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಕೊಲೆ : ಸ್ಯಾಂಡಲ್ ವುಡ್ ಸ್ಟಾರ್ ದರ್ಶನ್ ಬಂಧನ.

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಶನಿವಾರ ಮನೆಯಿಂದ ಹೊರಟವನು ವಾಪಸ್ ಬಂದಿರಲಿಲ್ಲ. ನಿನ್ನೆ ಬೆಂಗಳೂರು ಪೊಲೀಸರು ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವ ಮಾಹಿತಿಯನ್ನು ಕುಟುಂಬಸ್ಥರಿಗೆ ನೀಡಲಾಗಿತ್ತು. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ದರ್ಶನ್ ಬಂಧನವಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಚಾಲೆಂಜಿಂಗ್ ಸ್ಟಾರ್ ಅವರನ್ನು ಬಂಧಿಸಲಾಗಿದೆ. ಪರಿಚಯಸ್ತ ಮಹಿಳೆಗೆ ಯುವಕ ಮೇಸೇಜ್ ಮಾಡಿದ್ದ ಆರೋಪದ ಮೇಲೆ ​ಆತನಿಗೆ ದರ್ಶನ್ ಹೊಡೆದಿದ್ದಾರೆ ಎನ್ನಲಾಗಿದೆ. ಹೊಡೆದ ಏಟಿಗೆ ಯುವಕ ಗಂಭಿರವಾಗಿ ಗಾಯಗೊಂಡಿದ್ದನು. ಹರಿದಾಡುತ್ತಿರುವ ಮಾಹಿತಿಯಂತೆ ದರ್ಶನ್​ ಹೊಡೆಯುವ ಬರದಲ್ಲಿ ಯುವಕನ ಮರ್ಮಾಂಗಕ್ಕೆ ಒದ್ದಿದ್ದರು.ಒದ್ದ ಬೆನ್ನಲ್ಲೇ ಯುವಕ ಆಯತಪ್ಪಿ ನೆಲಕ್ಕೆ ಬಿದ್ದಿದ್ದ. ನೆಲದ ಮೇಲೆ ಬಿದ್ದ ಯುವಕ ನೋವಿನಿಂದ ಒದ್ದಾಡುತ್ತಿದ್ದ. ಹೀಗಿದ್ದೂ ದರ್ಶನ್, ಆಸ್ಪತ್ರೆಗೆ ಕರೆದುಕೊಂಡು ಹೋಗದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!