ಪೋಕ್ಸ್‌ ಕೇಸ್‌; ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರ ಸಿದ್ಧತೆ.

ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ಒಂದು ಪಕ್ಷ ಕೋರ್ಟ್ ವಾರಂಟ್ ಜಾರಿ ಮಾಡಿದರೆ ಪೊಲೀಸರು ಬಿಎಸ್​ ಯಡಿಯೂರಪ್ಪನವರನ್ನು ಬಂಧಿಸಲಿದ್ದಾರೆ.

ಇನ್ನು ಮತ್ತೊಂದೆಡೆ ತನಿಖೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟಿಸ್​ಗೆ ಬಿಎಂ ಯಡಿಯೂರಪ್ಪ ಉತ್ತರಿಸಿದ್ದಾರೆ. ನಾನು ಕಳೆದ ಮಾರ್ಚ್ 28 ರಂದು ನೀಡಿದ್ದ ನೋಟಿಸ್ ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ 17 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿ ಎಸ್ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌ವೈ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಕಳೆದ ಮಾರ್ಚ್ ತಿಂಗಳಲ್ಲೇ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಮಹಿಳೆಯ ದೂರಿಗೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪಗೆ ನೋಟಿಸ್ ಜಾರಿಗೊಳಿಸಿದ್ದ ಪೊಲೀಸರು ನಿನ್ನೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಅಪಾಯ ಮನಗಂಡ ಬಿಎಸ್ ವೈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ ಗೂ ಉತ್ತರ ನೀಡಿರುವ ಬಿಎಸ್‌ವೈ ಸೋಮವಾರ ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?