ಕಾಸರಗೋಡು: ವಿಷ ಸೇವಿಸಿದ ವಿದ್ಯಾರ್ಥಿನಿ – ಚಿಕಿತ್ಸೆ ಫಲಕಾರಿಯಾಗದೇ ಸಾವು.

ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.

ಉಪ್ಪಳ ಐಲ ಕುದುಪುಳು ವಿನ ಹರಿಣಾಕ್ಷಿ  ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು.
ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಿದಾಗ ವಿಷ ಸೇವನೆ ಮಾಡಿರುವ ಬಗ್ಗೆ ತಿಳಿದುಬಂದಿತ್ತು .

ಗಂಭೀರ ಸ್ಥಿತಿಗೆ ತಲಪಿದ್ದ ಧನ್ಯಶ್ರೀಳನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದ ಹಿನ್ನಲೆಯಲ್ಲಿ ವೈದ್ಯರ ಸಲಹೆಯಂತೆ ಕಾಸರಗೋಡಿಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ಮಹಜರು ನಡೆಸಿ ಮೃತದೇಹ ವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?