ಬಾಲಕನ ಕಿಡ್ನಾಪ್ : 10 ಲಕ್ಷಕ್ಕೆ ಬೇಡಿಕೆ.

ಬೆಂಗಳೂರು: ಬರ್ತ್‌ಡೇ ಪಾರ್ಟಿ ಇದೆ ಎಂದು ಆಸೆ ತೋರಿಸಿ ಬಾಲಕನೊಬ್ಬನನ್ನು ಕಿಡ್ನಾಪ್ ಮಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗೂರು ಬಳಿ ಸೋಮವಾರ ಸಂಜೆ  ನಡೆದಿದೆ. 

ರಾಜಸ್ಥಾನ ಮೂಲದ ಮಾರ್ವಾಡಿ ದಂಪತಿಯ 9 ವರ್ಷದ ಮಗನನ್ನು ಆರೋಪಿ ಮೊಹಮದ್ ಜಶಿಮುದ್ದೀನ್ ಶೇಕ್ (24) ಕಿಡ್ನಾಪ್ ಮಾಡಿದ್ದ. ಮನೆ ಬಳಿಯಿದ್ದ ಬಾಲಕನಿಗೆ ಕೇಕ್ ಕೊಡಿಸುವುದಾಗಿ ಆಸೆ ತೋರಿಸಿ ಕಿಡ್ನಾಪ್ ಮಾಡಿ 14 ಕಿ.ಮೀ ಸುತ್ತಾಡಿದ್ದಾನೆ.

ಪೋಷಕರಿಗೆ ಕರೆ ಮಾಡಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾನೆ.  ವೀರಸಂದ್ರ, ಹುಸ್ಕೂರು ಸುತ್ತಮುತ್ತ ಬಾಲಕನ ಜೊತೆ ಆರೋಪಿ ಓಡಾಟ ನಡೆಸಿದ್ದು, ಪದೇ ಪದೇ ಲೊಕೇಶನ್ ಬದಲಿಸಿ ಹಲವು ಕಡೆ ಆಟೋದಲ್ಲಿ ಸುತ್ತಾಟ ನಡೆಸಿ ಪೊಲೀಸರ ದಾರಿ ತಪ್ಪಿಸಿದ್ದಾನೆ.

ಕೊನೆಗೂ ಬಾಲಕನ ಕಿಡ್ನಾಪ್ ಪ್ರಕರಣ ಸುಖಾಂತ್ಯ ಕಂಡಿದ್ದು, ಬಾಲಕ ಪೋಷಕರ ಮಡಿಲು ಸೇರಿದ್ದಾನೆ. ಇಂದು ಬೆಳಗ್ಗೆ ಬಾಲಕ ಸಹಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

 ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 13 ಗಂಟೆಗಳಲ್ಲಿ ಬಾಲಕನನ್ನು ಪತ್ತೆಹಚ್ಚಿ ಪೋಷಕರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ಸ್ಪೆಕ್ಟರ್ ನವೀನ್, ಪಿಎಸ್‌ಐ ಸಿದ್ದಪ್ಪ ಸೇರಿ ಹಲವು ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.‌

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?