ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಶಾರ್ಟ್ ಸರ್ಕಿಟ್‌ನಿಂದ  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ

ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ

ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು

ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?