ಅಪಾಯದ ಮಟ್ಟದಲ್ಲಿಮೈದುಂಬಿ ಹರಿಯುತ್ತಿರುವ ನೇತ್ರಾವತಿ-ಕುಮಾರಧಾರ

ಅಪಾಯದ ಮಟ್ಟದಲ್ಲಿ ಮೈದುಂಬಿ ಹರಿಯುತ್ತಿರುವ ನೇತ್ರಾವತಿ-ಕುಮಾರಧಾರ

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಬುಧವಾರ ಬೆಳಿಗ್ಗೆ ಸ್ವಲ್ಪ ಬಿಡುವು ಕೊಟ್ಟ ವರುಣ ಮಧ್ಯಾಹ್ನ ನಂತರ ಮತ್ತಷ್ಟು ಬಿರುಸುಪಡೆದುಕೊಂಡಿದೆ. ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಇದೀಗ ಮೈದುಂಬಿ ಹರಿಯುತ್ತಿದ್ದು. ಅಪಾಯದ ಮಟ್ಟದತ್ತ ಸಾಗುತ್ತಿದೆ.


ಕಳೆದ ಎರಡು ದಿನಗಳಿಂದ ನೀರಿನ ಮಟ್ಟ 20 ಮೀಟರ್ ದಾಖಲಾಗಿದ್ದು, ಬುಧವಾರ ಸಂಜೆಗೆ ಜೀವನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಬಳಿ ನದಿ ನೀರಿನ ಮಟ್ಟ 28.5ಕ್ಕೆ ಏರಿದೆ. ದೇವಳದ ಅಂಗಣ ಪ್ರವೇಶಕ್ಕೆ ಕೇವಲ 10 ಮೆಟ್ಟಲುಗಳಷ್ಟೇ ಉಳಿದಿದೆ. ನೀರಿನ ಮಟ್ಟ 31.5 ಮೀಟರ್ ಗೆ ಏರಿದರೆ ಎರಡೂ ನದಿಗಳ ನೀರು ದೇವಳದ ಎರಡೂ ಭಾಗಗಳಿಂದ ಆವರಿಸಿ ಬಂದು ಸಂಗಮವಾಗುತ್ತದೆ.
ಪಶ್ಚಿಮ ಘಟ್ಟ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಬಹಳಷ್ಟು ಏರಿಕೆಯಾಗಿದೆ. ಪುತ್ತೂರು ತಾಲೂಕಿನಲ್ಲಿಯೂ ಮಳೆಯಬ್ಬರ ಹೆಚ್ಚಾಗುತ್ತಿದೆ.


ಮಳೆಗೆ ಜತೆಯಾದ ಗಾಳಿ
ಕಳೆದ ಶನಿವಾರದಿಂದ ಮಳೆಯ ಅಬ್ಬರ ಮಾತ್ರ ಕಂಡುಬರುತ್ತಿದ್ದು, ಇದೀಗ ಮಳೆಯ ಜತೆಗೆ ಗಾಳಿಯ ಅಬ್ಬರವೂ ಸೇರಿಕೊಂಡಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!