ತಲಪಾಡಿ ಪಂಚಾಯತ್ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ನಿಯಮಾನುಸಾರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘವು ನಿಯೋಗವು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ವರಿಗೆ ಸೋಮವಾರ ಮನವಿ ಸಲ್ಲಿಸಿತು.
ತಲಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಬರೋ ರಾ.ಹೆ66 ರ ಟೊಲ್ಗೇಟ್ ಬಳಿ ಬೀದಿಬದಿ ವ್ಯಾಪಾರಸ್ಥರನ್ನು ತೆರವು ಗೊಳಿಸಿದ ಹಿನ್ನಲೆಯಲ್ಲಿ.ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದರು 2014ರ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ ಮತ್ತು 2019ರ ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮಗಳ ವ್ಯಾಪಾರಕ್ಕೆ ಅವಕಾಶ ನೀಡುತ್ತಿಲ್ಲ. ಹೋರಾಟ ನಡೆಸಿದರೂ, ರಾಜಕೀಯ ಒತ್ತಡದಿಂದಾಗಿ ಬೀದಿಬದಿ ವ್ಯಾಪಾರಿಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ’ ಎಂದು ಸಂಘದ ಪ್ರಮುಖರು ಪಂಚಾಯತ್ ನ ಅಧಿಕಾರಿಯೊಂದಿಗೆ ಅಹವಾಲು ತೋಡಿಕೊಂಡರು.
ಸಂಘದ ಗೌರವಾಧ್ಯಕ್ಷ ಬಿ.ಕೆ.ಇಮ್ತಿಯಾಜ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಿನಯ್ ನಾಯ್ಕ್ ತಲಪಾಡಿ ಮನವಿ ಸಲ್ಲಿಸಿದರು