ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ; ಆರೋಪಿ ಬಂಧನ

ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ; ಆರೋಪಿ ಬಂಧನ

ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ನಿನ್ನೆ ರಾತ್ರಿ ಬನ್ನೂರಿನಲ್ಲಿ ತಾಯಿ ಮಗನಿಗೆ ಗಲಾಟೆ ನಡೆಯುತ್ತಿತ್ತು. ಈ ವಿಚಾರವಾಗಿ ವಿಚಾರಣೆಗೆಂದು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಯ ತಾಯಿ ಚಂದ್ರಾವತಿ ಅವರನ್ನ ಮನೆಯಲ್ಲಾದ ಗಲಾಟೆಯ ಬಗ್ಗೆ ಪೊಲೀಸರು ವಿಚಾರಿಸಿದ್ದಾರೆ. ಇದಾದ ಬಳಿಕ ಏಕಾಏಕಿ ಮನೆಯ ಒಳಗಿನಿಂದ ಬಂದ ಆರೋಪಿ ತೇಜಸ್ ಪೊಲೀಸರು ನಮ್ಮ ಮನೆಗೆ ಯಾಕೆ ಬಂದಿದ್ದಿರಿ ಎಂದು ಅವ್ಯಾಚ್ಯವಾಗಿ ಬೈದಿದ್ದಾನೆ. ಇಷ್ಟೇ ಅಲ್ಲದೇ ಪೊಲೀಸರ ಕಾರಿಗೆ ಮನೆಯಲ್ಲಿದ್ದ ಒಂದು ಕಾರನ್ನ ಅಡ್ಡವಾಗಿ ಇಟ್ಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿ ನಿಂದಿಸಿ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ವಿನಾಯಕ ಅವರ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಕೆದಂಬಾಡಿ ಗ್ರಾಮದ ಶೀನಪ್ಪ ಗೌಡ ಎಂಬವರ ದೂರಿನಂತೆ ತೇಜಸ್ ನ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಆರೋಪಿ ತೇಜಸ್ ನನ್ನ ಬಂಧಿಸಿಲಾಗಿದೆ.

News Editor

Learn More →

Leave a Reply

Your email address will not be published. Required fields are marked *