ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ’2024.

ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ’2024

ಬೆಂಗಳೂರಿನ ಸಮಾಜಸೇವಾ ಸಂಸ್ಥೆ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ 5ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮಾಜ ಸೇವಾ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ದಾಮೋದರ ಪಾಟಾಳಿಯವರಿಗೆ ಕರ್ನಾಟಕ ಸೇವಾ ರತ್ನ -2024 ಪ್ರಶಸ್ತಿಯನ್ನು ಜುಲೈ 29 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ , ನಯನ ಸಭಾಂಗಣದಲ್ಲಿ ನೀಡಿ ಗೌರವಿಸಲಿದೆ ಎಂದು ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ತಿಳಿಸಿದ್ದಾರೆ.


ಜೂನಿಯರ್ ಚೇಂಬರ್ ಇಂಟರ್ನ್ಯಾಷನಲ್ ಇದರ ಪೂರ್ವ ರಾಷ್ಟ್ರೀಯ ಸಂಯೋಜಕರಾಗಿದ್ದು, ಜೇಸಿ ವಲಯ ತರಬೇತಿದಾರರೂ ಆಗಿದ್ದಾರೆ. ವಿಶ್ವ ಹಿಂದೂ ಪರಿಷತ್ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿದ್ದು, ರೋಟರಿ ಕ್ಲಬ್ ಬಿರುಮಲೆ ಹಿಲ್ಸ್ ಇದರ ಸ್ಥಾಪಕ ಕಾರ್ಯದರ್ಶಿಯಾಗಿದ್ದಾರೆ. ಮಾರುಕಟ್ಟೆ ವಿಭಾಗದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದು, ರಕ್ತದಾನ,ಪರಿಸರ ಕಾರ್ಯಕ್ರಮ ವನ್ನು ಸಕ್ರಿಯವಾಗಿ ಸಂಘಟಿಸುತ್ತಿದ್ದಾರೆ. ಸುಮಾರು 39ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ಇವರು
ಪುತ್ತೂರು ವಾಣಿಯನ್ ಗಾಣಿಗ ಸಮಾಜ ಸೇವಾ ಸಂಘದ ಪೂರ್ವ ಅಧ್ಯಕ್ಷರಾಗಿದ್ದು ಗಿದ್ದು , ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ

News Editor

Learn More →

Leave a Reply

Your email address will not be published. Required fields are marked *