ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ – ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರು ಸಿಸಿಬಿ ಬಲೆಗೆ.

ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದೆ.

ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಬಂಧಿತ ಆರೋಪಿಗಳು.

ಮುಮ್ತಾಜ್ ಅಲಿಯವರು ಕೂಳೂರು ಸೇತುವೆಯ ಬಳಿ ಕಾರನ್ನು ನಿಲ್ಲಿಸಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿದ್ದರು. ಸೋಮವಾರ ಬೆಳಗ್ಗೆ ಅವರ ಮೃತದೇಹ ಪತ್ತೆಯಾಗಿತ್ತು. ಈ ನಡುವೆ ಮುಮ್ತಾಜ್ ಅಲಿಯವರ ಸಹೋದರ ಬಿ.ಎಂ. ಹೈದರ್ ಅಲಿಯವರು ಆತ್ಮಹತ್ಯೆಯ ಹಿಂದೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್, ಹನಿಟ್ರ್ಯಾಪ್ ಮಾಡಿರೋದೇ ಕಾರಣ ಎಂದು ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸದ್ಯ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಎ1 ಆರೋಪಿ ರೆಹಮತ್ ಮತ್ತು ಆಕೆಯ ಪತಿ ಶೋಯಬ್ ಎಂಬವರನ್ನು ಈಗಾಗಲೇ ವಶಪಡಿಸಿಕೊಂಡಿತ್ತು. ಇದೀಗ ಪ್ರಕರಣದ ಕಿಂಗ್ ಪಿನ್ ಅಬ್ದುಲ್ ಸತ್ತಾರ್ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ಕಾವೂರು ಪೊಲೀಸ್ ಠಾಣೆಯ ತನಿಖಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?