ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್ಪಂರದ್ಯಾಟ ಸಮಾರೋಪತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್.

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್ಪಂರದ್ಯಾಟ ಸಮಾರೋಪ
ತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್
ಪುತ್ತೂರು : ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್, ವಿದ್ಯಾಭಾರತಿ ಕರ್ನಾಟಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ವಾಲಿಬಾಲ್ಪಂದದ್ಯಾಟದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ತರುಣ ವರ್ಗದ ಹುಡುಗರ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರದ ಕೈಂರಂಗಳ ಶಾರದಾ ಗಣಪತಿ ವಿದ್ಯಾಸಂಸ್ಥೆ ಹಾಗೂ ಹುಡುಗಿಯರ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರದ ಮಡಂತ್ಯಾರು ಪದವಿಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು


ತರುಣ ವರ್ಗದ ಹುಡುಗರ ವಿಭಾಗದಲ್ಲಿ ಪೂರ್ವ ಯುಪಿ, ಉತ್ತರ ಕ್ಷೇತ್ರ ತೃತೀಯ ಸ್ಥಾನ ಪಡೆಯಿತು. ಹುಡುಗಿಯರ ವಿಭಾಗದಲ್ಲಿ ದಕ್ಷಿಣ ಕ್ಷೇತ್ರ ದ್ವಿತೀಯ, ರಾಜಸ್ಥಾನ ಕ್ಷೇತ್ರ ತೃತೀಯ ಸ್ಥಾನ ಪಡೆಯಿತು.
ಕಿಶೋರ್ ವರ್ಗದ ಹುಡುಗರ ವಿಭಾಗದಲ್ಲಿ ಪೂರ್ವ ಯುಪಿ ಚಾಂಪಿಯನ್, ದಕ್ಷಿಣ ಮಧ್ಯ ಕ್ಷೇತ್ರ ದ್ವಿತೀಯ, ಪಶ್ಚಿಮ ಯುಪಿ ತೃತೀಯ ಸ್ಥಾನ ಪಡೆಯಿತು. ಹುಡುಗಿಯರ ವಿಭಾಗದಲ್ಲಿ ದಕ್ಷಿಣ ಕ್ಷೇತ್ರ ಚಾಂಪಿಯನ್, ದಕ್ಷಿಣ ಮಧ್ಯ ಕ್ಷೇತ್ರ ದ್ವಿತೀಯ ಹಾಗೂ ರಾಜಸ್ಥಾನ ಕ್ಷೇತ್ರ ತೃತೀಯ ಸ್ಥಾನ ಪಡೆಯಿತು.
ಬಾಲವರ್ಗದ ಹುಡುಗರ ವಿಭಾಗದಲ್ಲಿ ಪಶ್ಚಿಮ ಯುಪಿ ಚಾಂಪಿಯನ್, ದಕ್ಷಿಣ ಮಧ್ಯ ಕ್ಷೇತ್ರ ದ್ವಿತೀಯ ಹಾಗೂ ದಕ್ಷಿಣ ಕ್ಷೇತ್ರ ತೃತೀಯ ಸ್ಥಾನ ಪಡೆಯಿತು. ಹುಡುಗಿಯರ ವಿಭಾಗದಲ್ಲಿ ದಕ್ಷಿಣ ಕ್ಷೇತ್ರ ಚಾಂಪಿಯನ್, ದಕ್ಷಿಣ ಮಧ್ಯ ಕ್ಷೇತ್ರ ದ್ವಿತೀಯ ಹಾಗೂ ಬಿಹಾರ್ ಕ್ಷೇತ್ರ ತೃತೀಯ ಸ್ಥಾನ ಪಡೆಯಿತು.
ಸಮಾರೋಪ : ಸಮಾರೋಪ ಸಮಾರಂಭದಲ್ಲಿ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ಪಂ:ದ್ಯಾಟ ಸಂಯೋಜಕ್ ಕಿಶೋರ್ ಚೌವಾಣ್‍, ದಕ್ಷಿಣ ಕ್ಷೇತ್ರ ಖೇಲ್ಸಂಪಯೋಜಕ್ ಯು.ಪಿ.ಹರಿದಾಸ್‍, ವಿದ್ಯಾಭಾರತಿ ಪ್ರಾಂತ ಸಂಘಟನಾ ಸಂಯೋಜಕ್ ಉಮೇಶ್‍, ಭಟ್ಕ್ರೀೋಡಾ ಪಟುಗಳಿಗೆ ಪದಕ ತೊಡಿಸಿ, ಪ್ರಶಸ್ತಿ ವಿತರಿಸಿ ಶುಭ ಹಾರೈಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ.ಕೃಷ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಡಾ.ಶಿವಪ್ರಕಾಶ್‍, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರವಿನಾರಾಯಣ ಎಂ., ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಉಪಸ್ಥಿತರಿದ್ದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ಸತೀಶ್ ರೈ ಸ್ವಾಗತಿಸಿದರು. ಶಿಕ್ಷಕಿಯರಾದ ಕವಿತಾ, ಸುಜಾತ ಕಾರ್ಯಕ್ರಮ ನಿರೂಪಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?