ವಿಧಾನ ಪರಿಷತ್ ಉಪ ಚುನಾವಣೆ ಪುತ್ತೂರಿನಲ್ಲಿ ಬಿರುಸಿನ ಮತದಾನ.

ವಿಧಾನ ಪರಿಷತ್ ಉಪ ಚುನಾವಣೆ

ಪುತ್ತೂರಿನಲ್ಲಿ ಬಿರುಸಿನ ಮತದಾನ

ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧೀಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಮತದಾನ ಬಿರುಸಿನಿಂದ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯನ್ನೊಳಗೊಂಡ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು, 6032 ಮಂದಿ ಮತದಾರರಿದ್ದಾರೆ. ಉಭಯ ಜಿಲ್ಲೆಗಳ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಶಾಸಕರು ಹಾಗೂ ಸಂಸದರು ಮತದಾನ ಮಾಡಲಿದ್ದಾರೆ. ಈಗಾಗ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನಿಂದ ಮತದಾನ ಆರಂಭಗೊಂಡಿದ್ದು, ಹಲವೆಡೆ ಬಿಜೆಪಿಯ ಚುನಾಯಿತ ಸದಸ್ಯರನ್ನೊಳಗೊಂಡ ಮತದಾರರು ಮತ ಚಲಾಯಿಸಿದ್ದಾರೆ.


ಪುತ್ತೂರಿನ ಆರ್ಯಾಪು ಕುರಿಯ ಪಂಚಾಯತ್ ನ ಬಿಜೆಪಿಯ ಎಲ್ಲಾ 14 ಸದಸ್ಯರು ಮತ ಚಲಾಯಿಸಿದ್ದಾರೆ. ಹಾಗೆಯೇ ಕೇಪು ಗ್ರಾಮ ಪಂಚಾಯತ್ ನ ಬಿಜೆಪಿಯ ಎಲ್ಲಾ 13 ಸದಸ್ಯರು ಮತ ಚಲಾವಣೆ ಮಾಡಿದ್ದಾರೆ. ನರಿಮೊಗರು, ವಿಡ್ಲ ಮುಡ್ನೂರು, ಹಿರೇಬಂಡಾಡಿ, ಕೆಯ್ಯೂರು, ಕೆದಂಬಾಡಿ, ಕೊಳ್ತಿಗೆ ಪಂಚಾಯತ್ ನ ಎಲ್ಲಾ ಬಿಜೆಪಿ ಸದಸ್ಯರು ಮತ ಚಲಾಯಿಸಿದ್ದಾರೆ.


ಇನ್ನು ಪುತ್ತೂರು ಬಿಜೆಪಿ ಕಚೇರಿಗೆ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಆಗಮಿಸಿದ್ದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಗೆಲುವಿಗೆ ಎಲ್ಲಾ ಬಿಜೆಪಿಯ ಸದಸ್ಯರು ಒಗ್ಗಟ್ಟಾಗಿ ಶ್ರಮಿಸುತ್ತಿದ್ದಾರೆ. ನಮ್ಮ ಗೆಲುವು ನಿಶ್ಚಿತ. ಆದ್ರೆ ಬಹುದೊಡ್ಡ ಅಂತರದಲ್ಲಿ ಗೆಲುವು ಪಡೆಯುವ ಮೂಲಕ ರಾಜ್ಯ ಸರ್ಕಾರಕ್ಕೆ ಜನಪ್ರತಿನಿಧಿಗಳೇ ಕಾಂಗ್ರೆಸನ್ನ ತಿರಸ್ಕಾರ ಮಾಡಿದ್ದಾರೆ ಅಂತ ಗೊತ್ತಾಗಬೇಕು ಎಂದರು. ಇನ್ನು
ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ನಿಂದ ರಾಜು ಪೂಜಾರಿ, ಎಸ್ ಡಿಪಿಐನಿಂದ
ಸಾದತ್ ಎಸ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಕಣದಲ್ಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?