ಮುಮ್ತಾಝ್ ಅಲಿ ಆತ್ಮಹತ್ಯೆಗೆ ಕಾರಣಕರ್ತ ಎಂಬ ಆರೋಪ: ನಾಸಿರ್ ಲಕ್ಕಿಸ್ಟಾರ್‌‌ಗೆ ಆ್ಯಸಿಡ್ ಎರಚುವ ಬೆದರಿಕೆ.

ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಆತ್ಮಹತ್ಯೆಗೆ ಕಾರಣರಾಗಿದ್ದಾರೆ ಎಂಬ ಆರೋಪದಲ್ಲಿ ಉದ್ಯಮಿ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಗೆ ಆ್ಯಸಿಡ್ ಎರಚುವ ಬೆದರಿಕೆ ಬಂದಿದ್ದು, ಅವರು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ನಮ್ಮೂರ ಸುದ್ದಿ’ ವಾಟ್ಸಾಪ್ ಗ್ರೂಪ್ ನಲ್ಲಿ ಅಕ್ಟರ್ ಕೃಷ್ಣಾಪುರ ಎಂಬಾತ ಆ್ಯಸಿಡ್ ಎರಚುವ ಬೆದರಿಕೆ ಹಾಕಿ 20 ಸೆಕೆಂಡ್ ನ ವಾಯ್ಸ್ ಮೆಸೇಜ್ ಹರಿಯಬಿಟ್ಟು ನನಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ನಾಸಿರ್ ಲಕ್ಕಿಸ್ಟಾರ್ ದೂರಿನಲ್ಲಿ ತಿಳಿಸಿದ್ದಾರೆ. ಆ ಆಡಿಯೋ ಕೂಡ ವೈರಲ್ ಆಗಿದೆ.

ನಾಸಿರ್ ಲಕ್ಕಿಸ್ಟಾರ್ ನೀಡಿರುವ ದೂರಿನಲ್ಲಿ, ಮುಮ್ತಾಝ್ ಅಲಿ ಯವರ ಆತ್ಮಹತ್ಯೆಯ ಹಿನ್ನಲೆಯ ವಿಚಾರದಲ್ಲಿ ‘ಇತ್ತು ಕೃಷ್ಣಾಪುರ’ ಎಂಬವರು ಅಡ್ಮಿನ್ ಆಗಿರುವ ‘ನಮ್ಮೂರ ಸುದ್ದಿ’ ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ದಿನಾಂಕ 24.10.2024 ರಂದು ಮಧ್ಯಾಹ್ನ ಸುಮಾರು 12:43 ಗಂಟೆಗೆ ಅಕ್ಟರ್ ಕೃಷ್ಣಾಪುರ ಎಂಬಾತನು ಮುಮ್ತಾಝ್ ಅಲಿಯವರ ಆತ್ಮಹತ್ಯೆಗೆ ನಾನು ಕೂಡಾ ಕಾರಣನಾಗಿರುವೆನೆಂದು ಬಿಂಬಿಸಿ, ಆತನ ಮೊಬೈಲ್ ಸಂಖ್ಯೆ ***214 ರಿಂದ ನನ್ನನ್ನು ಉದ್ದೇಶಿಸಿ, ಬ್ಯಾರಿ ಭಾಷೆಯಲ್ಲಿ “ಇವರನ್ನೆಲ್ಲಾ ಏನು ಮಾಡಬೇಕೆಂದರೆ, ಮೊದಲು ಅಡ್ಕ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು. ಇದನ್ನು ಬೈಕಂಪಾಡಿಯ ಅಂಗರಗುಂಡಿಯವರು ಮಾಡಬೇಕು. ಮುಖ ತೋರಿಸಬಾರದು, ಅಸಿಡ್ ಎರಚಬೇಕು” ಎಂಬುದಾಗಿ ವಾಟ್ಸಾಪ್ ಗ್ರೂಪ್ ನಲ್ಲಿ ನನಗೆ ಆಸಿಡ್ ಎರಚುವಂತೆ ಪ್ರಚೋದಿಸಿ 20 ಸೆಕೆಂಡ್ ನ ವ್ಯಾಸ್ ಮೆಸೇಜ್ ನ್ನು ಹರಿಯ ಬಿಟ್ಟು, ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?