ಮೈಸೂರು : ಮುಡಾ ಹಗರಣ : 30 ಲಕ್ಷ ರೂ ಹಣ ಎಣಿಸುವ ವಿಡಿಯೋ ಬಿಡುಗಡೆ ಮಾಡಿದ ಆರ್ ಟಿಐ ಕಾರ್ಯಕರ್ತ ಗಂಗರಾಜು.

ಮೈಸೂರು : ಮುಡಾದಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ ಮಧ್ಯವರ್ತಿ ಮೂಲಕ ಸೆಟಲ್ಮೆಂಟ್ ಡೀಡ್ ಮೂಲಕ ಕೋಟ್ಯಾಂತರ ರೂ ಅಕ್ರಮ ನಡೆದಿದ್ದು ಸೆಟಲ್ಮೆಂಟ್ ಡೀಡ್ ಮಾಡಿಕೊಂಡು ಶಿವಣ್ಣ ಎಂಬವರಿಗೆ ವಂಚಿಸಲಾಗಿದೆ ಎಂದು ಆರ್ ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ.



30 ಲಕ್ಷ ರೂ ಹಣ ಎಣಿಸುವ ವಿಡಿಯೋವನ್ನು ಗಂಗರಾಜು ಬಿಡುಗಡೆ ಮಾಡಿದ್ದು ಕಾರ್ತಿಕ ಬಡಾವಣೆಯ ಮಂಜುನಾಥ್ ಎಂಬಾತ ಕೋಟ್ಯಾಂತರ ರೂ ಡೀಲ್ ಮಾಡಿದ್ದಾನೆ ಸೆಟಲ್ಮೆಂಟ್ ಡೀಡ್ ಹೆಸರಿನಲ್ಲಿ ಸಚಿವ ಮಹದೇವಪ್ಪ ಸಹೋದರ ಪುತ್ರ ನವೀನ್ ಬೋಸ್ ಗೂ ಸೈಟ್ ನೀಡಿದ್ದಾನೆ ಲಕ್ಷಾಂತರ ರೂ ಹಣದ ವ್ಯವಹಾರ ನಡೆಸಿರುವುದಕ್ಕೆ ನನ್ನ ಬಳಿ ದಾಖಲೆಗಳಿವೆ ಎಂದು ಆರೋಪಿಸಿದ್ದಾರೆ.

ಇಡಿ ಅಧಿಕಾರಿಗಳಿಗೆ ಆ ವಿಡಿಯೋ ಕ್ಲಿಪ್ಪಿಂಗ್ ಕೂಡ ನೀಡ್ತೀನಿ ಎಂದಿದ್ದು ಎರಡು ಲಕ್ಷಕ್ಕಿಂತ ಹೆಚ್ಚಿನ ನಗದು ರೂಪದ ಹಣ ಬಳಸುವಂತಿಲ್ಲ ಆದರೆ ಮೂವತ್ತು ಲಕ್ಷ ರೂ ಹಣ ಎಣಿಸುವ ವಿಡಿಯೋ ಬಿಡುಗಡೆಮಾಡಿದ್ದು ಲೋಕಾಯುಕ್ತ ಅಧಿಕಾರಿಗಳ ಬಗ್ಗೆ ನನಗೆ ನಂಬಿಕೆ ಇಲ್ಲದ ಹಿನ್ನೆಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಗಂಗರಾಜು ಹೇಳಿಕೆನೀಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?