ಪರಶುರಾಮ ಮೂರ್ತಿ ವಿವಾದ : ಶಿಲ್ಪಿ ಕೃಷ್ಣ ನಾಯ್ಕ್‌ 7 ದಿನ ಪೊಲೀಸ್‌ ಕಸ್ಟಡಿಗೆ.

 ಬೈಲೂರಿನ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮ ಮೂರ್ತಿ ನಿರ್ಮಾಣ ಮಾಡಿರುವ ಶಿಲ್ಪಿ, ಕೃಷ್‌ ಆರ್ಟ್‌ ವರ್ಲ್ಡ್‌ನ ಕೃಷ್ಣ ನಾಯ್ಕ್‌ನನ್ನು ಕಾರ್ಕಳ ನಗರ ಪೊಲೀಸರು ನ. 10ರಂದು ಬಂಧಿಸಿದ್ದು, ನ. 11ರಂದು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಕೃಷ್ಣ ನಾಯ್ಕ್‌ನನ್ನು 7 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಕೃಷ್ಣ ನಾಯ್ಕ್‌ ವಿರುದ್ಧ ಕೃಷ್ಣ ಶೆಟ್ಟಿ ಬಜಗೋಳಿ ದಾಖಲಿಸಿರುವ ದೂರಿಗೆ ಸಂಬಂಧಪಟ್ಟಂತೆ ನ.4ರಂದು ಕಾರ್ಕಳ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಶಿಲ್ಪಿ ಕೃಷ್ಣ ನಾಯ್ಕ್‌ ಅವರ ನಿರೀಕ್ಷಣಾ ಜಾಮೀನು ಆದೇಶವನ್ನು ನ.7ಕ್ಕೆ ಕಾಯ್ದಿರಿಸಿದ್ದರು. ನ.7ರಂದು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತವಾಗಿದೆ. ಜಾಮೀನು ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ ನ.10ರಂದು ಪೊಲೀಸರು ಕೃಷ್ಣ ನಾಯ್ಕ್‌ನನ್ನು ಕ್ಯಾಲಿಕಟ್‌ನಲ್ಲಿ ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

News Editor

Learn More →

Leave a Reply

Your email address will not be published. Required fields are marked *