ಚಿನ್ನದ ಪದಕ ವಿಜೇತ ಪುತ್ತೂರಿನ ಕ್ರೀಡಾಪಟು ಕುಮಾರಿ ಜಿ.ಎಂ. ಕೀರ್ತಿ ಗೆ ಮುಖ್ಯಮಂತ್ರಿಯವರಿಂದ ೧ ಲಕ್ಷ ರೂ ಸಹಾಯಧನ.

ಮುಖ್ಯಮಂತ್ರಿಯವರಿಂದ ೧ ಲಕ್ಷ ರೂ ಸಹಾಯಧನ

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿ.ಎಂ. ಕೀರ್ತಿ ಬಿನ್. ಮೊನಪ್ಪ, ಇವರು ಪ್ರಸ್ತುತ ಶೈಕ್ಷಣಿಕ ವರ್ಷದ ೬೭ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದಿಂದ ೧೪ ರ ವಯೋಮಾನದ ಎತ್ತರ ಜಿಗಿತ ವಿಭಾಗದಲ್ಲಿ ಭಾಗವಹಿಸಿದ ಕರ್ನಾಟಕಕ್ಕೆ ಚಿನ್ನದ ಪದಕ ಪಡೆದ ರಾಜ್ಯಕ್ಕೆ ಹೆಸರು ತಂದಿರುತ್ತಾರೆ ಹಾಗೂ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪಡೆದಂತಹ ಏಕೈಕ ಪದಕವಾಗಿರುತ್ತದೆ. ಈ ಕ್ರೀಡಾಪಟುವಿನ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಸಹಾಯಧನವನ್ನು ಘೋಷಣೆ ಮಾಡಿರುತ್ತಾರೆ.

ವಿದ್ಯಾರ್ಥಿನಿಯು ತೀರಾ ಹಿಂದುಳಿದ ಕುಟುಂಬದವರಾಗಿದ್ದು, ಈ ಸಾಧನೆಗೆ ಮತ್ತು ಮುಂದೇ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳಲು ಅಭ್ಯಾಸ ನಡೆಸಲು ಹಾಗೂ ಇವರ ಮುಂದಿನ ಕ್ರೀಡಾಕ್ಷೇತ್ರದ ಉಜ್ವಲ ಭವಿಷ್ಯಕ್ಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕನೆರವಿನ ಹಸ್ತವನ್ನು ನೀಡಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿದ್ದ ಶಾಸಕ ಅಶೋಕ್ ರೈ ಅವರು ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ್ದರು. ಮನೆಗೆ ತೆರಳಿದ ವೇಳೆ ಆಕೆಯ ಸಂಕಷ್ಟವನ್ನು ಅರಿತ ಶಾಸಕರು ನಸರಕಾರದಿಂದ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದರು. ಶಾಸಕರ ಪತ್ರವನ್ನು ಪರಿಗಣಿಸಿದ ಸರಕಾರ ಈ ನಗದನ್ನು ಘೋಷಣೆ ಮಾಡಿದೆ.

News Editor

Learn More →

Leave a Reply

Your email address will not be published. Required fields are marked *