January 11, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯವರು ಇಲ್ಲದೇ ಇರುವ ಸಮಯದಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋಡೇಜನ್ನು ಮೀಟಿ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋದ ಬಗ್ಗೆ, ಪ್ರಕರಣ ದಾಖಲಾಗಿದ್ದು, ಈ ರೀತಿಯ ಕಳ್ಳತನ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಆಗುತ್ತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಜಂಟಿ ಕಾರ್ಯಾಚರಣೆ ನಡೆಸಿ ಹಗಲು ಮನೆ ಕಳ್ಳ ತನ ನಡೆಸಿ ಯಾವುದೇ ಸುಳಿವು ನೀಡದೇ ಪರಾರಿಯಾಗುತ್ತಿದ್ದ ಆರೋಪಿಯನ್ನು ಅಪರಾಧ ಪತ್ತೆ ತಂಡ ಜ.10 ರಂದು ಕಳ್ಳತನಕ್ಕೆ ಉಪಯೋಗಿಸುತ್ತಿದ್ದ ಕಾರು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

ಕಾಸರಗೋಡು ಜಿಲ್ಲೆಯ ಉಪ್ಪಳ ಗುಡ್ಡೆಮನೆ ನಿವಾಸಿ, ಪ್ರಸ್ತುತ ಕಾಸರಗೋಡು ಮಂಜೇಶ್ವರ ಹೊಸಂಗಡಿ, ಮೂಡಂಬೈಲು, ನವಿಲು ಗಿರಿ ನಿವಾಸಿ ಸೂರಜ್ ಕೆ. (36 ವ.) ಬಂಧಿತ ಆರೋಪಿ. ಬಂಧಿತ ಆರೋಪಿಯನ್ನು ವಿಚಾರಿಸಿದಾಗ ಆತನು ಪುತ್ತೂರು ಗ್ರಾಮಾಂತರ ಠಾಣಾ ಸರಹದ್ದಿನ ಸರ್ವೆ ಗ್ರಾಮದ ಭಕ್ತಕೋಡಿ, ಈ ಹಿಂದೆ ಕಡಬ ಠಾಣಾ...
Read More