ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಎಫ್‌ಐಆರ್ ದಾಖಲಾಗಿರಬೇಕಿಲ್ಲ: ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠದ ತೀರ್ಪು.

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಎಫ್‌ಐಆರ್ ದಾಖಲಾಗಿರಬೇಕಿಲ್ಲ: ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠದ ತೀರ್ಪು
ಯಾವುದೇ ವ್ಯಕ್ತಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಂದರ್ಭದಲ್ಲಿ ಎಫ್‌ಐಆರ್ ದಾಖಲಾಗಿರಬೇಕು ಎಂಬ ನಿಯಮ ಇಲ್ಲ. ಎಫ್‌ಐಆರ್ ಇಲ್ಲದಿದ್ದರೂ ನಿರೀಕ್ಷಣಾ ಜಾಮೀನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠ ತೀರ್ಪು ನೀಡಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್, ಬೇಲಾ ಎಂ. ತ್ರಿವೇದಿ ಅವರಿದ್ದ ತ್ರಿ ಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.

ಅಪರಾಧಿಕ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ನಿರೀಕ್ಷಣಾ ಜಾಮೀನಿಗೆ ಕುರಿತಾಗಿರುವ ಇರುವ ಅಂಶಗಳು ಸೀಮಾ ಸುಂಕ ಕಾಯ್ದೆ ಮತ್ತು ಜಿಎಸ್‌ಟಿ ಕಾಯ್ದೆಗೆ ಕೂಡ ಅನ್ವಯವಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ತೀರ್ಪು ಪ್ರಕಟಿಸುವಾಗ ಸ್ಪಷ್ಟಪಡಿಸಿದರು.

ಸಿಆರ್‌ಪಿಸಿಯ ಸೆಕ್ಷನ್ 438ರ ಅಡಿಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸುವುದಕ್ಕೂ ಮೊದಲು ಎಫ್‌ಐಆರ್ ದಾಖಲಾಗಿರಬೇಕು ಎಂಬ ನಿಯಮ ಇಲ್ಲ. ವಾಸ್ತವ ಏನು ಎಂಬುದು ಸ್ಪಷ್ಟವಾಗಿದ್ದರೆ, ಬಂಧನದ ಭೀತಿಗೆ ಸಕಾರಣಗಳು ಇದ್ದರೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ಹೇಳಿದೆ.

ಸೀಮಾ ಸುಂಕ ಅಧಿಕಾರಿಗಳು ಪೊಲೀಸರಲ್ಲ, ಸೀಮಾ ಸುಂಕ ಅಧಿಕಾರಿಗಳಿಂದ ಬಂಧಿತ ವ್ಯಕ್ತಿಯು ತನ್ನ ವಕೀಲರನ್ನು ಭೇಟಿ ಮಾಡುವ ಹಕ್ಕು ಹೊಂದಿರುತ್ತಾನೆ. ಆದರೆ, ವಿಚಾರಣೆಯ ಉದ್ದಕ್ಕೂ ಆತ ವಕೀಲರನ್ನು ಭೇಟಿ ಮಾಡುವಂತಿಲ್ಲ ಎಂದು ನ್ಯಾಯಪೀಠ ಹೇಳಿದೆ.


News Editor

Learn More →

Leave a Reply

Your email address will not be published. Required fields are marked *