ಈಟಿವಿ ಭಾರತ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ನಿಧನ.

‘ಈಟಿವಿ ಭಾರತ’ದ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ಅವರು ಭಾನುವಾರ ಬೆಳಗ್ಗೆ ನಿಧನರಾದರು. ಕಳೆದ ತಿಂಗಳು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಅವರು ತೀವ್ರ ಗಾಯಗೊಂಡಿದ್ದರು.
ಮಂಗಳೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದರು.

ಸಂದೀಪ್ ಅವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾರ್ಚ್​​ 29ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿಗೆ (ಸ್ಪೈನಲ್ ಕಾರ್ಡ್​) ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಕಾಪು ತಾಲೂಕಿನ ಶಿರ್ವ ನಿವಾಸಿಯಾಗಿರುವ ಇವರು, ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಬ್ಲಿಕ್ ಟಿವಿ, ಸ್ಪಂದನಾ ಸುದ್ದಿ ವಾಹಿನಿಯಲ್ಲಿ ಕ್ಯಾಮರಾಮನ್, ಬಿ ಟಿವಿಯ ಕ್ಯಾಮರಾಮನ್ ಹಾಗೂ ವರದಿಗಾರರಾಗಿ ಇವರು ಸೇವೆ ಸಲ್ಲಿಸಿದ್ದು, ಪ್ರಸ್ತುತ ಈಟಿವಿ ಭಾರತ್ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ, ಲೈವ್ ವಾಹಿನಿಗಳಾದ ಸಿ4ಯು, ಪ್ರೈಮ್ ಕಾರ್ಲದಲ್ಲಿ ತಂತ್ರಜ್ಞರಾಗಿ ಇವರು ಕಾರ್ಯನಿರ್ವಹಿಸಿದ್ದರು.

ಸಂದೀಪ್ ಅವರು ತಂದೆ-ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *