
ಸರಕಾರಿ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಆರೋಪ
ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿದ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು
ಹಲ್ಲೆಗೆ ಯತ್ನ ನಡೆಸಿದ ಆರೋಪಿಗಳಾದ ಜೊಹರಾ ಮತ್ತು ಸಮಾದ್ ಬಂಧಿಸುವಂತೆ ಒತ್ತಾಯ
ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳು
ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯ
ಸಂಘಟನೆಗಳ ಒತ್ತಡಕ್ಕೆ ಮಣಿದು ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ, ಶಾಸಕ ಅಶೋಕ್ ಕುಮಾರ್ ರೈ
ಶಾಸಕ ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು
ಇಂದು ಸಂಜೆ 6 ಗಂಟೆಗೆ ಒಳಗೆ ಆರೋಪುಗಳನ್ನು ಬಂಧಿಸುವ ಭರವಸೆ ನೀಡಿದ ಶಾಸಕ ಮತ್ತು ಡಿವೈಎಸ್ಪಿ
ಅಧಿಕಾರಿಗಳ ಭರವಸೆ ಹಿನ್ನಲೆಯಲ್ಲಿ ರಸ್ತೆ ತಡೆ ಪ್ರತಿಭಟನೆ ವಾಪಾಸು ಪಡೆದ ಪ್ರತಿಭಟನಾಕಾರರು
ಇಂದು ಸಂಜೆ ಒಳಗೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಪುತ್ತೂರು ತಾಲೂಕಿನಾದ್ಯಂತ ವೈದ್ಯಕೀಯ ಸೇವೆ ನಿಲುಗಡೆಗೆ ವೈದ್ಯರ ನಿರ್ಧಾರ
ಆರೋಪಿಗಳನ್ನು ಬಂಧಿಸದಿದ್ದರೆ ಸೋಮವಾರ ಪುತ್ತೂರು ತಾಲೂಕು ಬಂದ್ ಗೆ ಹಿಂದೂ ಸಂಘಟನೆಗಳ ಎಚ್ಚರಿಕೆ


