ಲಂಚ ಸ್ವೀಕರಿಸುತ್ತಿದ್ದಾಗ ಗಣಿ& ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಮತ್ತು ಚಾಲಕ ಲೋಕಾ ಬಲೆಗೆ

ಮಂಗಳೂರು : ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು ಅರ್ಜಿ ಸಲ್ಲಿಸಿದ್ದು. ಇದಕ್ಕೆ ಉಳ್ಳಾಲ  ತಹಶಿಲ್ದಾರರು 21/03/2025 ರಂದು ಪ್ರಮಾಣ ಪತ್ರ ನೀಡಿರುತ್ತಾರೆ. ಆದ್ರೆ ಗಣಿ ಇಲಾಖೆಯಲ್ಲಿ ಅನುಮತಿ ಪತ್ರ ನೀಡಿರುವುದಿಲ್ಲ . ಈ ಬಗ್ಗೆ ವಿಚಾರಿಸಲು ಗಣಿ ಇಲಾಖೆಗೆ ಹೋದಾಗ ಉಪ ನಿರ್ದೇಶಕಿ ಕೃಷ್ಣವೇಣಿಯ ಕೊಠಡಿಗೆ ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಸಿ ಫೈಲಿಗೆ  ಅನುಮತಿ  50 ಸಾವಿರ ಹಣ ತೆಗೆದುಕೊಳ್ಳಿ ನಂತರ ಸಹಿ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ದೂರುದಾರ ದೂರು ನೀಡಿದ್ದರು.

ಲಂಚದ ಹಣ 50 ಸಾವಿರ ರೂಪಾಯಿ ಮಂಗಳೂರು ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯಲ್ಲಿ ಮೇ.28 ರಂದು ದೂರುದಾರರ ಕೈಯಿಂದ ವಾಹನ ಚಾಲಕ ಮಧು ಎಂಬಾತನ ಮೂಲಕ ಉಪ ನಿರ್ದೇಶಕಿ ಕೃಷ್ಣ ವೇಣಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ ಅಗಿ ವಾಹನ ಚಾಲಕ ಮಧು ಮತ್ತು ಉಪ ನಿರ್ದೇಶಕಿ ಕೃಷ್ಣವೇಣಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ, ಮಂಗಳೂರು  ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷರಾದ ಡಾ.ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ , ಉಡುಪಿ ಜಿಲ್ಲಾ ಲೋಕಾಯುಕ್ತ ನಿರೀಕ್ಷಕರಾದ ಮಂಜುನಾಥ,  ರಾಜೇಂದ್ರ ನಾಯಕ್ ಸಿಬ್ಬಂದಿ ಜೊತೆ  ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ನೆರೆ ಸಂತ್ರಸ್ತರಿಗೆ ತನ್ನ ಗಂಟಿಹೊಳೆ ಮನೆಯಲ್ಲೇ ಆಶ್ರಯ ನೀಡಿದ ಬೈಂದೂರು ಶಾಸಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪುತ್ತೂರು ಯುವ ಕಾಂಗ್ರೆಸ್ ಸಭೆಯು ಶಾಸಕರಾದ ಅಶೋಕ್ ಕುಮಾರ್ ರೈ ಮಾರ್ಗದರ್ಶನದಲ್ಲಿ ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷರಾದ ಅಖಿಲ್ ಕಲ್ಲಾರೆಯವರ ಅಧ್ಯಕ್ಷತೆಯಲ್ಲಿ ಪುತ್ತೂರು ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಶ್ಚಿಮ ಘಟ್ಟದ ತಪ್ಪಲಿನಗ್ರಾಮಗಳಲ್ಲಿ ಒಂಟಿ ಸಲಗ ಹಾವಳಿ-ಸೀತಾನದಿ: ಮುಂದುವರಿದ ಆನೆ ಕಾಟ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪುತ್ತೂರಿನ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರನಿಗೆ ನಿಂದನೆ ಆರೋಪಿ ಪುತ್ತೂರು ನಗರ ಠಾಣೆಗೆ ಹಾಜರು-ನೌಕರರಲ್ಲಿ ಕ್ಷಮೆಯಾಚನೆ.