
ಮಂಗಳೂರು: ಕೊಲೆಗಳು, ಗುಂಪು ಗಲಭೆಗಳು, ಕೋಮುವಾದದ ಕಿಚ್ಚು, ಕರಾವಳಿ ನಗರವನ್ನೇ ಬೆಚ್ಚಿಬೀಳಿಸುತ್ತಿದೆ. ಮಂಗಳವಾರ ರಾತ್ರಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಬೆನ್ನಲ್ಲೇ ಪ್ರತೀಕಾರದ ಮಾತು ಕೇಳಿ ಬಂದಿದ್ದು. ಬೆದರಿಕೆಯ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ ಎಂದು ಗುರುತಿಸಲಾಗಿದೆ. ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆಗೆ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕಿದರು. ನಮ್ಮ ಸಮುದಾಯಕ್ಕೆ ರಕ್ಷಣೆ ಇಲ್ಲ ಎಂದು ಕೂಗಿ ಹೇಳುತ್ತಿದ್ದಾರೆ. ಇದರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ರಿವೇಂಜ್ ವಾರ್ ಶುರುವಾಗಿದೆ. ಟಾರ್ಗೆಟ್ ಬಾಯ್ ಪೇಜ.
