ಆ.24ರಂದು ಪುತ್ತೂರು ಮಹಾಲಿಂಗೇಶ್ವರ ನಟರಾಜ ವೇದಿಕೆಯಲ್ಲಿ ನಡೆಯಲಿರುವ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು

ಪುತ್ತೂರು: ದ.ಕ. ಜವಾಹರ್ ಬಾಲ್ ಮಂಚ್, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ, ಸಂಶೋಧನಾ ಸಂಸ್ಥೆ ಬಾಳ್ತಿಲ ವತಿಯಿಂದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಆ.24ರಂದು ಬೆಳಗ್ಗೆ 9ರಿಂದ ಪುತ್ತೂರು ಮಹಾಲಿಂಗೇಶ್ವರ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ವಕೀಲೆ ಶೈಲಜಾ ರಾಜೇಶ್ ಹೇಳಿದರು.

ಮುದ್ದು ಕೃಷ್ಣ ವೇಷ ಸ್ಪರ್ಧೆ, ಯಶೋಧ ಕೃಷ್ಣ ವೇಷ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಬೆಂಕಿ ಬಳಸದೆ ಅಡುಗೆ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 11 ರಿಂದ ಶ್ರೀಶೈಲ ಕಲಾ ನೃತ್ಯ ತಂಡದಿಂದ ನವಶಕ್ತಿ ನೃತ್ಯ ರೂಪಕ, 11.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ನಡೆಸಲಿದ್ದಾರೆ. ಮಾಜಿ ಸಚಿವ ರಮಾನಾಥ ರೈ, ಸಭಾಧ್ಯಕ್ಷ ಯು. ಟಿ. ಖಾದರ್ ಸೇರಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ ೪ರಿಂದ ಸಮಾರೋಪ ಸಮಾರಂಭ, ಬಹುಮಾನ ವಿತರಣೆ ನಡೆಯಲಿದ್ದು, ಮಾಜಿ ಎಂ.ಎಲ್.ಸಿ. ಹರೀಶ್ ಕುಮಾರ್, ವಕೀಲ ಪದ್ಮರಾಜ್ ಪೂಜಾರಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಾಲೂಕು ಸಂಯೋಜಕಿ ರಮ್ಲತ ಎಂ. ಸಾಮೆತ್ತಡ್ಕ, ಸದಸ್ಯೆ ಜಯಶೀಲಾ ಲೋಕನಾಥ್, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಶೌರ್ಯ, ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *