ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ

ಪುತ್ತೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ವಿರೋಧ ಆಗುತ್ತಿರುವ ಸಂದರ್ಭ ಕ್ಷೇತ್ರದ ಜೊತೆಗೆ ನಾವಿದ್ದೇವೆ ಎಂಬುದನ್ನು ಸಾರಲು ಮಾಜಿ ಸಂಸದ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಮಂಡಲಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಧ್ಯಾಹ್ನ ಧರ್ಮ ಜಾಗೃತಿಯ ಬೃಹತ್ ಯಾತ್ರೆ ನಡೆಯಿತು.
ಪುತ್ತೂರಿನಿಂದ 150ಕ್ಕೂ ಹೆಚ್ಚು ವಾಹನ ಧರ್ಮಸ್ಥಳಕ್ಕೆ ತೆರಳಿದೆ.

ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಕೊನೆಯಲ್ಲಿ ಧರ್ಮ ಜಾಗೃತಿ ಯಾತ್ರೆಗೆ ತೆಂಗಿನ ಕಾಯಿ ಒಡೆದು ಚಾಲನೆ ನೀಡಲಾಯಿತು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾ‌ರ್ ಪಿ.ಬಿ ತೆಂಗಿನ ಕಾಯಿ ಒಡೆಯುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು.

ಈ ಸಂದರ್ಭ ಮಾಜಿ ಸಂಸದರಾಗಿರುವ ಧರ್ಮಸ್ಥಳದ ಪರವಾಗಿ ನಡೆಯುವ ಸಮಾವೇಶದ ಕೇಂದ್ರ ಸಮಿತಿ ಉಸ್ತುವಾರಿ ಹೊಂದಿರುವ ನಳಿನ್ ಕುಮಾರ್ ಕಟೀಲ್, ಪುತ್ತೂರು ತಾಲೂಕು ಜನಾಗ್ರಹ ಸಮಾವೇಶದ ಉಸ್ತುವಾರಿ ದ.ಕ.ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾ‌ರ್ ರೈ ಬಾಲ್ಗೊಟ್ಟು, ಬಿಜೆಪಿಯ ಹಿರಿಯರಾದ ಚನಿಲ ತಿಮ್ಮಪ್ಪ ಶೆಟ್ಟಿ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದು ಸಂಘಟನೆಗಳ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ನಗರಸಭಾ ಸದಸ್ಯ ಕೆ.ಜೀವಂಧ‌ರ್ ಜೈನ್, ರಾಜೇಶ್ ಬನ್ನೂರು, ನಾಗೇಂದ್ರ ಬಾಳಿಗ, ನಿರಂಜನ್, ಶಶಿಧರ್ ನಾಯಕ್, ಸುರೇಶ್ ಆಳ್ವ, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು,ಹರಿಪ್ರಸಾದ್ ಯಾದವ,ಚಂದ್ರಶೇಖರ ಬಪ್ಪಳಿಗೆ,ನಿತೇಶ್ ಶಾಂತಿವನ, ಹರೀಶ್ ಬಿಜಾತ್ರೆ, ನವೀನ್ ರೈ ಕೈಕಾರ ಸಹಿತ ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಧರ್ಮಸ್ಥಳಕ್ಕೆ ತೆರಳಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”