ಕಾವೇರಿಕಟ್ಟೆಯಲ್ಲಿ ಗಣೇಶೋತ್ಸವ ಸಂಭ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವೇರಿಕಟ್ಟೆ ಇದರ 27ನೇ ವರ್ಷದ ಗಣೇಶೋತ್ಸವ ಪುತ್ತೂರಿನ ದರ್ಬೆಯ ಕಾವೇರಿಕಟ್ಟೆ ಕಾರ್ಟೇಕ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಇಂದು ಬೆಳಿಗ್ಗೆ ಅರ್ಚಕರಾದ ಉದಯ್ ಭಟ್ ಸಂಪ್ಯ ಇವರ ನೇತೃತ್ವದಲ್ಲಿ ಗಣಪತಿ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. ಬಳಿಕ ಗಣಪತಿ ಹವನ, ಮಹಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ದಿನೇಶ್ ಪಿ., ಅಧ್ಯಕ್ಷ ಗೋವರ್ಧನ ಶೆಟ್ಟಿ, ಉಪಾಧ್ಯಕ್ಷ ನಳೀನಾಕ್ಷ, ಕಾರ್ಯದರ್ಶಿ ದಿನೇಶ್ ಕುಮಾರ್ ಮರೀಲ್, ಕೋಶಾದಿಕಾರಿ ಕೆ.ಪಿ. ಸುಧಾಕರ್, ಜೊತೆ ಕೋಶಾಧಿಕಾರಿ ರವೀಂದ್ರ ಹೆಗ್ಡೆ ಮರೀಲ್, ಗೌರವ ಸಲಹೆಗಾರರಾದ ಡಾ.ಗೋಪಿನಾಥ್ ಪೈ, ಬಿ.ವೆಂಕಟೇಶ್ ಭಟ್ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”