ಕರಾವಳಿಗೆ ಎಂಟ್ರಿಕೊಟ್ಟ ಓಮನ್ ಫಿಶ್!

ಮಂಗಳೂರು: ಕರಾವಳಿಗೆ ಓಮನ್ ದೇಶದ ಬಂಗುಡೆ, ಬೂತಾಯಿ ನಮ್ಮಲ್ಲಿಗೆ ಎಂಟ್ರಿ ಕೊಟ್ಟಿದೆ. ಈ ಭಾರೀ ನಮ್ಮಲ್ಲಿ ಮೀನಿನ ಉತ್ಪತ್ತಿ ಕಡಿಮೆಯಾಗಿದ್ದು, ಮಾರುಕಟ್ಟೆಗೆ ದೊಡ್ಡ ದೊಡ್ಡ ಗಾತ್ರದ ಓಮನ್ ಮೀನು‌ಗಳು ಲಗ್ಗೆ ಇಟ್ಟಿದೆ. ಇದೀಗ ಇದನ್ನ ಖರೀದಿಸಲು ಜನ ಮುಗಿ ಬೀಳುತ್ತಿದ್ದಾರೆ.

ದೇಶದ ಪಶ್ಚಿಮ ಕರಾವಳಿಯಲ್ಲಿ ಈ ಬಾರಿ ಬೂತಾಯಿ ಮೀನು ವಿಪರೀತ ಕಡಿಮೆಯಾಗಿದ್ದು, ಇದನ್ನು ಸರಿದೂಗಿಸಲು ಓಮನ್‌ನಿಂದ ಬೂತಾಯಿ ಬಂದಿದೆ. ಅದಕ್ಕೂ ವಿಪರೀತ ಬೇಡಿಕೆ ಬಂದಿದೆ. ಹೌದು ಇಲ್ಲಿನ ಬೂತಾಯಿಯ ಎರಡು ಪಟ್ಟು ದೊಡ್ಡದಿರುವ ಸಾಧಾರಣ ಬಂಗುಡೆಯಷ್ಟು ಈ ಒಮಾನ್ ಬೂತಾಯಿ ತೂಗುತ್ತಿದೆ. ಸಣ್ಣ ಬಂಗುಡೆ ಮತ್ತು ದೊಡ್ಡ ಬೂತಾಯಿ ರುಚಿ ಕಡಿಮೆ. ದೊಡ್ಡ ಬಂಗುಡೆ, ಸಣ್ಣ ಬೂತಾಯಿ ರುಚಿ ಜಾಸ್ತಿ ಎಂಬ ಮಾತಿಗೆ ವ್ಯತಿರಿಕ್ತವಾಗಿ ಈ ಬೂತಾಯಿ ಇದೆ. ಬೂತಾಯಿ ದೊಡ್ಡದಿದ್ದರೂ ರುಚಿಯಲ್ಲಿ ಇಲ್ಲಿನ ಬೂತಾಯಿಯಷ್ಟೆ ಇರುವುದರಿಂದ ಬೇಡಿಕೆಯೂ ಹೆಚ್ಚಿದೆ.

ಇನ್ನು ಪ್ರತಿ ದಿನ ಒಮಾನ್‌ನಿಂದ ಗೋವಾಗೆ ಬಂದು, ಅಲ್ಲಿಂದ ಮಲ್ಪೆಗೆ ಎರಡು ಕಂಟೈನರ್ ಒಮಾನ್ ಬೂತಾಯಿ ಬರುತ್ತಿದೆ. ಮಲ್ಪೆ ಮಾತ್ರವಲ್ಲದೇ ಮಂಗಳೂರು, ರತ್ನಗಿರಿ, ಪಾಂಡಿಚೇರಿ, ಕೇರಳಕ್ಕೂ ಒಮಾನ್ ಬೂತಾಯಿ ಸರಬರಾಜು ಆಗುತ್ತಿದೆ. ಆದ್ರೆ, ಒಮಾನ್ ಮತ್ತು ಭಾರತ ಪಶ್ಚಿಮ ಕರಾವಳಿ ಒಂದೇ ಸಮುದ್ರದ ಎರಡು ದಡದಲ್ಲಿದೆ. ಒಂದೇ ಸಮುದ್ರದ ಎರಡು ತುದಿಯಲ್ಲಿ ಒಂದೇ ಮೀನು ಎರಡು ಆಕಾರದಲ್ಲಿ ಇರುವುದು ಸೋಜಿಗ ತಂದಿದೆ. ರುಚಿಯಲ್ಲಿ ಮಾತ್ರ ಯಾವುದೇ ವ್ಯತ್ಯಾಸವಿಲ್ಲ ಎನ್ನುತ್ತಾರೆ ಮೀನು ಸವಿದವರು.

ಸಮುದ್ರ ಬದಲಾದಾಗ ಮೀನಿನ ಆಕಾರ, ರುಚಿ, ಬದಲಾಗುತ್ತದೆ. ಹಾಗಾಗಿ ಅರಬ್ಬೀ ಸಮುದ್ರದ ಮೀನಿಗಿರುವ ರುಚಿ ಬಂಗಾಳಕೊಲ್ಲಿಯಲ್ಲಿ ಸಿಗುವ ಮೀನಿಗಿಲ್ಲ. ಅದಕ್ಕಾಗಿಯೇ ತಮಿಳುನಾಡು, ಆಂಧ್ರದಿಂದ ಬರುವ ಮೀನುಗಳಿಗೆ ಬೇಡಿಕೆ ಕಡಿಮೆ ಇರುತ್ತದೆ. ಆದ್ರೆ ಇದೀಗ ಕರಾವಳಿಗೆ ಬರುವ ಓಮನ್ ದೇಶದ ದೊಡ್ಡ ಗಾತ್ರದ ಬಂಗುಡೆ, ಬೂತಾಯಿ ಮೀನುಗಳಿಗೆ ಭಾರೀ ಬೇಡಿಕೆ ಹೆಚ್ಚಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.