
ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.8 ರಂದು ಬೆಳಗ್ಗೆ 10 ಗಂಟೆಗೆ ಮುಖಕ್ಕೆ ಮಾಸ್ಕ್ ಧರಿಸಿ ಸಾಮಾನ್ಯ ವ್ಯಕ್ತಿಯಂತೆ ಜಯಂತ್ ಟಿ. ಒಳದಾರಿ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ.

ಜಯಂತ್ ಟಿ. ಐದನೇ ದಿನದ ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ. ನಿರಂತರ ವಿಚಾರಣೆಯಲ್ಲಿ ತೊಡಗಿದ್ದು, ಇಂದು ಮತ್ತೆ ಸ್ಥಳ ಮಹಜರು ನಡೆಸುವ ಸಾಧ್ಯತೆಯಿದೆ.
