ರಾಷ್ಟ್ರೀಯ ಹೆದ್ದಾರಿಯಲ್ಲಿ ಮರದ ಲೋಡ್ ಲಾರಿಗಳ ಸರಣಿ ಅಪಘಾತಗಳು

ಉಳ್ಳಾಲ: ಮಂಗಳೂರು ಕಡೆಯಿಂದ ತಲಪಾಡಿ ಗಡಿ ಪ್ರದೇಶದಲ್ಲಿ ಇರುವ ಹಲವಾರು ಮರದ ಮಿಲ್ಲು – ಫ್ಲೈವುಡ್ ಕಾರ್ಖಾನೆಗಳಿಗೆ ದಿನದ 24 ಗಂಟೆಯೂ ಮರದ ದಿಮ್ಮಿಗಳು ನಿರಂತರವಾಗಿ ಓವರ್ ಲೋಡ್ ಆಗಿ ಹೋಗುತ್ತಿದ್ದು ನಿನ್ನೆ ರಾತ್ರಿ ಹೊತ್ತು ಬೀರಿ ಸಮೀಪದ ಉಚ್ಚಿಲದಲ್ಲಿ ಟಯರ್ ಬ್ಲಾಸ್ಟ್ ಆಗಿ ಲಾರಿಯೊಂದು ನಡು ರಸ್ತೆಯಲ್ಲಿ ಬಾಕಿಯಾಗಿದೆ.

ದೇವಿಪುರ ದೇವಸ್ಥಾನ ರಸ್ತೆ ಮತ್ತು ಟೋಲ್ ಮುಖಾಂತರ ಪಾಸಾಗಿ ಲಘು ವಾಹನಗಳು ಇದ್ದ ರಸ್ತೆಯನ್ನೇ ಉಪಯೋಗಿಸಿಕೊಂಡು ಕಳ್ಳ ಮಾರ್ಗದ ಮೂಲಕ ಜನವಸತಿ ಪ್ರದೇಶದ ಜಾಗದಲ್ಲಿ ಅಣಬೆಗಳು ಹುಟ್ಟಿದಂತೆ ಹುಟ್ಟಿಕೊಂಡ ಹತ್ತಾರು ಅಕ್ರಮ ಮರದ ಮಿಲ್ಲುಗಳಿಗೆ ಮರಗಳು ಸಾಗುತ್ತಿದೆ. ಕೆಲವು ಅಧಿಕಾರಿಗಳು, ಸ್ಥಳೀಯ ಚುನಾಯಿತ ಜನ ಪ್ರತಿನಿಧಿಗಳ ತುಂಬು ಹೃದಯದ ಸಹಕಾರದಿಂದ ಜನವಸತಿ ಪ್ರದೇಶದಲ್ಲಿ ಅಕ್ರಮ ಕೈಗಾರಿಕಾ ಪ್ರದೇಶದಂತೆ ಮಾಡಿ ಈ ಅಕ್ರಮ ಮಿಲ್ಲುಗಳು ತಲೆಯೆತ್ತಿವೆ.

ತಲಪಾಡಿಯಿಂದ ದೇವಿಪುರ ತನಕ ಆದ ಸುಂದರ ಕಾಂಕ್ರೀಟ್ ರಸ್ತೆಯು ಇಲ್ಲಿ ಹಾದು ಹೋಗುವ ಈ ಅಕ್ರಮ ದಂದೆಕೋರರ ಕಾರುಬಾರಿನಿಂದ ಹಲವಾರು ವರ್ಷಗಳು ಬಾಳಿಕೆ ಬರಬೇಕಾದ ರಸ್ತೆಯು ಬಿರುಕುಬಿಟ್ಟು ಸಂಪೂರ್ಣ ಹಾಳಾಗಿ ಹೋಗಿದೆ.
ತಲಪಾಡಿ ಗ್ರಾಮದ ಸಾವಿರಾರು ದೇವಿಯ ಭಕ್ತರು… ನಾಗರಿಕರು.. ದೇವಸ್ಥಾನದ ಆಡಳಿತ ಮಂಡಳಿ ಕೂಡ ಇದರ ವಿರುದ್ದ ಚಕಾರ ಎತ್ತುತ್ತಿಲ್ಲ, ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಕೊಟ್ಟು ಈ ಅಕ್ರಮಗಳನ್ನು ನಿಲ್ಲಿಸುವುದು ಉತ್ತಮ ಎಂಬುದು ಸಾರ್ವಜನಿಕ ವಲಯದ ಅಭಿಪ್ರಾಯ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.