ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.2ರ ತನಕ ನಡೆಯುವ ವಿವಿಧ ಸೇವಾ ಚಟುವಟಿಗಳಿಗೆ ಪೂರಕವಾಗಿ ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನವನ್ನು ಸೇವಾ ಚಟುವಟಿಕೆಯ ಮೂಲಕ ಸೇವಾ ಪಾಕ್ಷಿಕ ಕಾರ್ಯಕ್ರಮವಾಗಿ 14 ದಿವಸ ನಿರಂತರ ಕಾರ್ಯಕ್ರಮ ನಡೆಯಲಿದೆ. ಸಮಾಜದ ದೀನ ದಲಿತ, ದುರ್ಬಲ ಅನಾರೋಗ್ಯ ಪೀಡಿತರಿಗೆ ನೆರವು, ಸಾರ್ವಜನಿಕ ಪರಿಸರದ ಬಗ್ಗೆ ಕಾಳಜಿ ವಹಿಸಿ ಹತ್ತಾರು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದರು.

ಈ ಸಂದರ್ಭ ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ.ಬಿ, ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ, ವಸಂತಲಕ್ಷ್ಮೀ, ಸತೀಶ್ ನೈಕ್ ಕಾರ್ಯದರ್ಶಿ ಶಶಿಧರ್ ನಾಯಕ್,
ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವರ್ಣಲತಾ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮೀ ಶಗ್ರಿತ್ತಾಯ, ಆಶಾ ಭಗವಾನ್, ಯುವ ಮೋರ್ಚಾ ಅಧ್ಯಕ್ಷ ನಿತೇಶ್ ಕಲ್ಲೇಗ, ನಗರಸಭಾ ಸದಸ್ಯರಾದ ಗೌರಿ ಬನ್ನೂರು, ಕೆ.ಜೀವಂಧರ್ ಜೈನ್, ಶಕ್ತಿ ಕೇಂದ್ರದ ಪ್ರಮುಖ್ ನಾಗೇಂದ್ರ ಬಾಳಿಗ, ಪ್ರಮುಖರಾದ ನಿರಂಜನ್, ಪುತ್ತೂರು ಕೋ ಆಪರೇಟಿವ್ ಬ್ಯಾಂಕ್‍ನ ನಿರ್ದೇಶಕ ಶ್ರೀಧರ ಪಟ್ಲ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದಯಾನಂದ ಕರ್ಮಲ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಸಂಜೀವ ಗಾಣಿಗ, ಜಯ ಕಾರೆಕ್ಕಾಡು, ಸುಮತಿ, ಸೇಸಮ್ಮ, ಸುಪ್ರಬಾ, ಹೇಮಾವತಿ, ರಕ್ತೇಶ್ವರಿ ವಠಾರದ ಶಶಿಧರ್ ಸಪಲ್ಯ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *