ಮದುವೆಯಾಗುವುದಾಗಿ ವಂಚನೆ ಪ್ರಕರಣ : ಶ್ರೀಕೃಷ್ಣನೇ ಅಪ್ಪ ಎಂದು ‘ಡಿ ಎನ್ ಎ ವರದಿಯಲ್ಲಿ ಬಂದಿದೆ’- ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ ಪತ್ರಿಕಾಗೋಷ್ಠಿ

ಪುತ್ತೂರು:ಮದುವೆಯಾಗುವುದಾಗಿ ವಂಚನೆ ಪ್ರಕರಣಕ್ಕೆ
ಸಂಬಂಧಿಸಿ ಇದೀಗ ಡಿ ಎನ್ ಎ ಪರೀಕ್ಷೆ ವರದಿ ಬಂದಿದೆ. ಶ್ರೀಕೃಷ್ಣ ಜೆ ರಾವ್ ಮಗುವಿನ ಅಪ್ಪ ಎಂದು ಸಂತ್ರಸ್ತೆಯ ಮನೆಯವರಿಗೆ ಮಾಹಿತಿಯನ್ನು ತಿಳಿಸಲಾಗಿದೆ ಎಂದು ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಸಮಾಜದ ಬಡ ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ. ಹಿಂದೆ ಸೀತಾಮಾತೆಗೆ ಅಗ್ನಿ ಪರೀಕ್ಷೆ ನಡೆಯಿತು. ಇವತ್ತಿನ ಕಾಲದಲ್ಲಿ ಡಿ ಎನ್ ಎ ಪರೀಕ್ಷೆಯೇ ಅಂತಿಮವಾಗಿದೆ. ಹಾಗಾಗಿ ಎಲ್ಲಾ ವಿಚಾರಕ್ಕೂ ಡಿ ಎನ್ ಎ ಪರೀಕ್ಷೆ ಅಂತಿಮವಾಗಿದೆ. ಡಿ ಎನ್ ಎ ಪರೀಕ್ಷೆ ವರದಿ ಬಂದಿದೆ. ಈಗಾಗಲೇ ಕೋರ್ಟ್ ಗೆ ಹೋಗಿದೆ ಎಂದವರು ಹೇಳಿದರು.

ಮುಂದೆ ಪಿ ಜಿ ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ ರಾವ್‌ ಸಂತ್ರಸ್ತೆಯನ್ನು ವಿವಾಹ ಆಗಬೇಕೆಂದು ನಮ್ಮ ಕೋರಿಕೆ. ಯಾಕೆಂದರೆ ಹುಡುಗ ಇನ್ನು ಬಾಳಿ ಬದುಕಬೇಕಾದವ. ಅವರು ಮದುವೆ ಆದರೆ ಉತ್ತಮ. ನಮಗೂ ಕೋರ್ಟ್ ಗೆ ಹೋಗಲು ಇಷ್ಟವಿಲ್ಲ. ಆದರೂ ಕೋರ್ಟ್ ನಲ್ಲಿ ಅದರ ರೀತಿಯಲ್ಲಿ ನಡೆಯುತ್ತದೆ ಎಂದವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಸಂತ್ರಸ್ತೆ, ಆಕೆಯ ತಾಯಿ ನಮಿತಾ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!