ಫಿಲೋಷಿಪ್ ಇನ್ ಪೈನ್ ಮೆಡಿಸಿನ್ ಪದವಿಯನ್ನು ಪೂರ್ಣಗೊಳಿಸಿದ ಡಾ. ಪ್ರಜ್ಞ ಜಯರಾಮ್

ಪುತ್ತೂರು: ಕೊಲ್ಕತ್ತಾದಲ್ಲಿರುವ ದರಾ ದಿಯಾ ಪೈನ್ ಕ್ಲಿನಿಕ್ ನಲ್ಲಿ ಡಾ. ಗೌತಮ್ ದಾಸ್ ಅವರ ಮಾರ್ಗದರ್ಶನದಲ್ಲಿ ರೋಗಿಗಳ ದೀರ್ಘಕಾಲದ ನೋವನ್ನು ನಿವಾರಿಸುವ ಅಥವಾ ಕಡಿಮೆ ಮಾಡಲು ಅನುಕೂಲಕರವಾದ ಫಿಲೋಷಿಪ್ ಇನ್ ಪೈನ್ ಮೆಡಿಸಿನ್ ಪದವಿಯನ್ನು ಡಾ. ಪ್ರಜ್ಞ ಜಯರಾಮ್ ಪೂರ್ಣಗೊಳಿಸಿದ್ದಾರೆ. ಅವರು ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಸಂತ ಫಿಲೋಮಿನಾ ಪದವಿ ಶಿಕ್ಷಣ ತದನಂತರ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದು ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನಲ್ಲಿ ಅನಸ್ತೇಶಿಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿ ಪ್ರಸ್ತುತ ಬೆಂಗಳೂರಿನ ದಯಾನಂದ ಸಾಗರ್ ಮೆಡಿಕಲ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತಿ ಡಾ. ಚಿರಂತ್ ಮಕ್ಕಳ ತಜ್ಞರಾಗಿದ್ದು ಅದೇ ಕಾಲೇಜಿನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಡಾ. ಪ್ರಜ್ಞ ಜಯರಾಮ್ ಅವರು ಪುತ್ತೂರಿನ ದರ್ಬೆ ನಿವಾಸಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿ ನಿವೃತ್ತರಾಗಿರುವ ಜಯರಾಮ್ ಮಡಪ್ಪಾಡಿ ಹಾಗೂ ತ್ರಿವೇಣಿ ದಂಪತಿಯ ಪುತ್ರಿ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!