ಆರ್ ಟಿಓ ಲಕ್ಷ್ಮೀನಾರಾಯಣ ಪಿ ನಾಯಕ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ

ಉಡುಪಿ: ಆರ್ ಟಿ ಓ ಲಕ್ಷ್ಮೀನಾರಾಯಣ ಪಿ ನಾಯಕ್ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿಯ ಕಿನ್ನಿಮುಲ್ಕಿ ಫ್ಲ್ಯಾಟ್ ನಲ್ಲಿ ಇರುವ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಲಕ್ಷ್ಮೀ ನಾರಾಯಣ ನಾಯಕ್ ಅವರ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮನೆಯಲ್ಲಿಯೂ ಪರಿಶೀಲನೆ ನಡೆಸಿದ್ದಾರೆ. ಒಟ್ಟು 5 ತಂಡ ರಚಿಸಿ 5 ಕಡೆಗಳಲ್ಲಿ ದಾಳಿ ನಡೆಸಲಾಗಿರುತ್ತದೆ. ಪಡುಅಲೆವೂರಿನಲ್ಲಿರುವ ಅಧಿಕಾರಿಯ ಆಪ್ತ ರವಿ ಸೇರಿಗಾರ್‌ನ ಮನೆ ಮತ್ತು ಕಚೇರಿಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

2 ಕೋಟಿ ರೂ ಮೌಲ್ಯದ ಆಸ್ತಿ ಪತ್ತೆ

2 ಮನೆ & ವಿವಿಧ ಸರ್ವೆ ನಂಬರಗಳಲ್ಲಿ 3 ನಿವೇಶನ, ಚಿನ್ನ, ಬೆಳ್ಳಿ, ಗೃಹೋಪಯೋಗಿ ವಸ್ತುಗಳು ಹಾಗೂ ಬ್ಯಾಂಕ್ ಖಾತೆಗಳಲ್ಲಿರುವ ಹಣ ಸೇರಿ ಒಟ್ಟು 2,21,14,234 ಮೌಲ್ಯದ ಆಸ್ತಿ ಪಾಸ್ತಿಗಳು ಪತ್ತೆಯಾಗಿದೆ. ತನಿಖೆ ಮುಂದುವರೆದಿದ್ದು, ಆರೋಪಿತರ1 ಬ್ಯಾಂಕ್ ಲಾಕರ್, ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಹಾಗೂ ದಾಖಲೆಗಳ ಪರಿಶೀಲನಾ ಕಾರ್ಯ ಹಾಗೂ ಸಂಬಂಧಪಟ್ಟ ಇನ್ನು ಹೆಚ್ಚಿನ ಸ್ಥಳಗಳ ಮಾಹಿತಿ ಸಂಗ್ರಹಣೆ ಮುಂದುವರೆದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!